ದೇಶ- ವಿದೇಶ

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷ ಉಂಟಾಗಿದ್ದು, ಯುದ್ಧ ದಾಳಿಗೆ ತೈಲ ಸಂಗ್ರಹಗಾರಗಳೇ (Oil tanks) ಪ್ರಮುಖ ಟಾರ್ಗೆಟ್ ಆಗಿವೆ. ಯುದ್ಧದ ಪರಿಣಾಮ ಹೊರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಾಟ ಸಂಪೂರ್ಣ ತಡೆಯಾಗಿರುವುದರಿಂದ ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರುತ್ತಿದೆ. ಕೆಲ ಕಚ್ಚಾ ತೈಲಗಳು ಬ್ಯಾರೆಲ್‌ಗೆ 120 ಡಾಲರ್ ಮಟ್ಟ ತಲುಪಿದೆ. ಇದು 2022ರ ರಷ್ಯಾ-ಉಕ್ರೇನ್ ಯುದ್ಧದ ನಂತರದ ಅತಿದೊಡ್ಡ ಏರಿಕೆಯಾಗಿದೆ.

ಇರಾನ್‌ನಲ್ಲಿ ಸುಪ್ರೀಂ ಲೀಡರ್ ಅಲಿ ಖಾಮೆನೆಯಿ ಸಾವಿನ ನಂತರ ಮೊಜ್ತಬಾ ಖಾಮೆನೆಯಿ ಹೊಸ ನಾಯಕರಾಗಿ ನೇಮಕಗೊಂಡಿದ್ದಾರೆ. ಇದರ ಜೊತೆಗೆ ಇಸ್ರೇಲ್-ಅಮೆರಿಕಾ ದಾಳಿಗಳು ತೈಲ ಡಿಪೋಗಳು, ಟ್ಯಾಂಕರ್‌ಗಳು ಮತ್ತು ಸಾಗಾಟ ಮಾರ್ಗಗಳ ಮೇಲೆ ಪರಿಣಾಮ ಬೀರಿವೆ. ಜಾಗತಿಕ ತೈಲ ಸಾಗಾಟದ 20-30% ಹಾದುಹೋಗುವ ಹೊರ್ಮುಜ್ ಜಲಸಂಧಿ ಸಂಪೂರ್ಣ ಅಡಚಣೆಗೊಳಗಾಗಿದೆ. ಇರಾಕ್, ಕುವೈತ್ ಸೇರಿದಂತೆ ಮಧ್ಯಪ್ರಾಚ್ಯ ಉತ್ಪಾದಕರು ಉತ್ಪಾದನೆ ಕಡಿತಗೊಳಿಸಿದ್ದಾರೆ. ಇದರಿಂದ ಜಾಗತಿಕ ಶೇರು ಮಾರುಕಟ್ಟೆಗಳು ಸಹ ಕುಸಿದಿವೆ. ಜಾಗತಿಕ ತೈಲ ಸಾಗಾಟದ 20–30% ಹೊರ್ಮುಜ್ ಜಲಸಂಧಿಯ ಮೂಲಕ ನಡೆಯುತ್ತದೆ. ಇರಾನ್ ದಾಳಿಗಳ ನಂತರ ಟ್ಯಾಂಕರ್‌ಗಳ ಮೇಲೆ ಡ್ರೋನ್ ಹಲ್ಲೆಗಳು ನಡೆದಿವೆ. ಇರಾಕ್ 15 ಲಕ್ಷ ಬ್ಯಾರೆಲ್ ಉತ್ಪಾದನೆ ಕಡಿತಗೊಳಿಸಿದೆ. ಇದರಿಂದ ಜಿ-7 ದೇಶಗಳು ತುರ್ತು ದಾಸ್ತಾನು ಬಿಡುಗಡೆ ಮಾಡುವ ಸಾಧ್ಯತೆಯನ್ನು ಪರಿಗಣಿಸುತ್ತಿವೆ

“ಸಂಘರ್ಷ ತ್ವರಿತವಾಗಿ ಕೊನೆಗೊಂಡರೆ ಬೆಲೆಗಳು ಕುಸಿಯುತ್ತವೆ. ಆದರೆ ಉದ್ದಕ್ಕೆ ಎಳೆದರೆ 150 ಡಾಲರ್ ತಲುಪುವ ಸಾಧ್ಯತೆ ಇದೆ” ಎಂದು ತೈಲ ವಿಶ್ಲೇಷಕರು ಹೇಳಿದ್ದಾರೆ.

ಕಚ್ಛಾ ತೈಲ ಬೆಲೆ ದುಬಾರಿಯಾದರೆ ಭಾರತದ ಮೇಲೇನು ಪರಿಣಾಮ?
ಆರ್ಥಿಕತೆಗೆ ಹಿನ್ನಡೆ : ತಜ್ಞರ ಪ್ರಕಾರ ಬ್ಯಾರಲ್​ಗೆ 10 ಡಾಲರ್​ನಷ್ಟು ಬೆಲೆ ಏರಿಕೆಯಾದರೆ, ಭಾರತದ ಜಿಡಿಪಿ ಬೆಳವಣಿಗೆ 50 ಮೂಲಾಂಕಗಳಷ್ಟು (ಶೇ. 0.5) ಹಿನ್ನಡೆ ಹೊಂದುತ್ತದೆ.
ಹಣದುಬ್ಬರ ಏರಿಕೆ : ಕಚ್ಚಾ ತೈಲ ಬೆಲೆ ಏರಿಕೆಯಾದರೆ ಪೆಟ್ರೋಲ್, ಡೀಸಲ್, ಎಲ್​ಪಿಜಿ, ಎಲ್​ಎನ್​ಜಿ, ಪಿಎನ್​ಜಿ ಇತ್ಯಾದಿ ಬೆಲೆಗಳೆಲ್ಲವೂ ಏರುತ್ತವೆ. ಇದರಿಂದಾಗಿ ಇತರ ಹಲವು ಸರಕುಗಳ ಬೆಲೆ ಏರುತ್ತದೆ. ಪರಿಣಾಮವಾಗಿ, ಹಣದುಬ್ಬರ ಹೆಚ್ಚುತ್ತದೆ.
ಕರೆಂಟ್ ಅಕೌಂಟ್ ಡೆಫಿಸಿಟ್ ಏರಿಕೆ : ದುಬಾರಿ ಬೆಲೆಗೆ ತೈಲವನ್ನು ಆಮದು ಮಾಡಿಕೊಳ್ಳುವುದರಿಂದ ಭಾರತ ಹೆಚ್ಚು ಡಾಲರ್​ಗಳನ್ನು ವ್ಯಯಿಸಬೇಕು. ಇದರಿಂದ ಕರೆಂಟ್ ಅಕೌಂಟ್ ಡೆಫಿಸಿಟ್ ಉಂಟಾಗುತ್ತದೆ. ಡಾಲರ್ ಎದುರು ರುಪಾಯಿ ಮತ್ತಷ್ಟು ದುರ್ಬಲಗೊಳ್ಳುತ್ತದೆ. ಇದರಿಂದ ಆಮದು ವೆಚ್ಚ ಮತ್ತಷ್ಟು ಹೆಚ್ಚುತ್ತದೆ. ಇದು ಹಣದುಬ್ಬರ ಮತ್ತಷ್ಟು ಹೆಚ್ಚಲು ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಸ್ಥಿರ!
ಭಾರತ ತನ್ನ 80% ತೈಲ ಅಗತ್ಯತೆಯನ್ನು ಆಮದು ಮಾಡುತ್ತದೆ. ಆದರೂ “ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವುದಿಲ್ಲ”. ದೇಶದಲ್ಲಿ ಸುಮಾರು 25 ದಿನಗಳ ತೈಲ ದಾಸ್ತಾನು ಇದೆ. ಹೊರ್ಮುಜ್ ಅವಲಂಬನೆ ಕಡಿಮೆ ಮಾಡಿ ಬೇರೆ ಮೂಲಗಳಿಂದ (ರಷ್ಯಾ, ಸೌದಿ, ಅಮೆರಿಕಾ) ಆಮದು ಹೆಚ್ಚಿಸಲಾಗುತ್ತಿದೆ. ಹಣದುಬ್ಬರದ ಮೇಲೆ ದೊಡ್ಡ ಪರಿಣಾಮ ಬೀಳುವುದಿಲ್ಲ ಎಂದು ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದರೆ ಸಂಘರ್ಷ ದೀರ್ಘಕಾಲ ಮುಂದುವರಿದರೆ ಸಾರಿಗೆ, ಅಡುಗೆ ಎಣ್ಣೆ ಹಾಗೂ ಇತರ ಸರಕುಗಳ ಬೆಲೆ ಏರಬಹುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 hours ago