Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂ ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್‌

ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ.

ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್‌ ಶಂಕರ್‌ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್‌ ಹೈಕೋರ್ಟ್‌ ಅಥವಾ ಜಿಲ್ಲಾ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.

ರಸ್ತೋಗಿ ಅವರು ವಾರಣಾಸಿಯ ಸಿವಿಲ್‌ ನ್ಯಾಯಾಧೀಶರ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಇಡೀ ಜ್ಞಾನವಾಪಿ ಸಂಕೀರ್ಣದ ಸಮಗ್ರ ಸಮೀಕ್ಷೆಯನ್ನು ನಡೆಸಲು ಎಎಸ್‌ಐಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು.

ಆದರೆ ವಾರಣಾಸಿಯ ಸಿವಿಲ್‌ ನ್ಯಾಯಾಲಯವು ಈ ಅರ್ಜಿಯನ್ನು ವಜಾ ಮಾಡಿದ್ದು, ಈ ಬೆನ್ನಲ್ಲೇ ಮುಂದಿನ ರೂಪುರೇಷೆಗಳ ಬಗ್ಗೆ ಹಿಂದೂ ಕಾರ್ಯಕರ್ತರು ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!