ದೇಶ- ವಿದೇಶ

ಗೋವಾ ಸಚಿವ ಹಾಗೂ ಮಾಜಿ ಸಿಎಂ ರವಿ ನಾಯ್ಕ್‌ ನಿಧನ

ಪಣಜಿ: ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್‌ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್‌ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಅವರನ್ನು ಪೊಂಡಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್‌ ನಿಧನರಾಗಿದ್ದಾರೆ. ಇಂದು ಸಂಜೆ 5 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನು ಓದಿ: ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

79 ವರ್ಷದ ರವಿ ನಾಯ್ಕ್‌ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್‌ ನಿಧನಕ್ಕೆ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಸಂತಾಪ ಸೂಚಿಸಿದ್ದಾರೆ.

ರವಿ ನಾಯ್ಕ್‌ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್‌ ಸಾವಂತ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್‌, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ್ದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

34 mins ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

3 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

3 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

3 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

3 hours ago