ಪಣಜಿ: ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಅವರನ್ನು ಪೊಂಡಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 5 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನು ಓದಿ: ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ
79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ.
ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ್ದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಉಲ್ಲೇಖಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…