ಪಣಜಿ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶನಿವಾರ(ಮೇ.೨೫) ರಾತ್ರಿ ಸಂಭವಿಸಿದೆ.
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು, ಕೆಲಸ ಮುಗಿಸಿ ರಸ್ತೆ ಬದಿಯ ತಮ್ಮ ಗುಡಿಸಲುಗಳಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ ಗುಡಿಸಲುಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಘಟನೆಯ ವಿವರ
ಪಣಜಿ ಸಮೀಪದ ಖಾಸಗಿ ಕಂಪನಿಯೊಂದರ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಏಕಾಏಕಿ ಕಾರ್ಮಿಕರು ಮಲಗಿದ್ದ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದೆ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಕರಣ ಸಂಬಂದ ಖಾಸಗಿ ಬಸ್ ಚಾಲಕನನ್ನು ಬಂಧಿಸಲಾಗಿದೆ. ಘಟನೆಯ ವೇಳೆ ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಕೊಲ್ಲುವುದಾಗಿ ಇತರ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…