ಪುಣೆ : ತಲೆಮರೆಸಿಕೊಂಡಿದ್ದ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಈತ 2024 ರ ಸೆಪ್ಟಂಬರ್ 7 ರಂದು ಏಳು ದಿನ ಪರೋಲ್ನಲ್ಲಿ ಹೊರಗೆ ಬಂದಿದ್ದ. ಈ ವೇಳೆ ಆರೋಪಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪರೋಲ್ ಅವಧಿ ಮುಗಿದರು ಜೈಲಿಗೆ ವಾಪಸ್ಸಾಗದೆ ತಲೆ ಮರೆಸಿಕೊಂಡಿದ್ದ ಈತ ಪುಣೆಯ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ ನಡೆಸುತ್ತಿದ್ದ. ಈ ವೇಳೆ ಆರೋಪಿ ಮತ್ತು ಸಹಚರರನ್ನು ಜ.22ರಂದು ಬಂಧಿಸಲಾಗಿದ್ದು. ತನಿಖೆ ವೇಳೆ ಈತ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಎನ್ನುವುದು ಗೊತ್ತಾಯಿತು. ಈತ ತನ್ನ ಗ್ಯಾಂಗ್ನೊಂದಿಗೆ ಗುಜರಾತ್ನ ಗೋಧ್ರಾದಿಂದ ಪುಣೆ ಜಿಲ್ಲೆಗೆ ಬಂದು ಕಳ್ಳತನ ನಡೆಸುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
2002 ಫೆ.22 ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್ಪ್ರೆಸ್ ಎಸ್-6 ಕೋಚ್ಗೆ ಬೆಂಕಿ ಹಚ್ಚಿ 59 ಮಂದಿಯನ್ನು ಕೊಂದ ಪ್ರಕರಣದಲ್ಲಿ ಆರೋಪಿ ಜರ್ದ ಮತ್ತು ಸಹಚರರು ದೋಷಿಗಳಾಗಿದ್ದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…