ಪುಣೆ : ತಲೆಮರೆಸಿಕೊಂಡಿದ್ದ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಈತ 2024 ರ ಸೆಪ್ಟಂಬರ್ 7 ರಂದು ಏಳು ದಿನ ಪರೋಲ್ನಲ್ಲಿ ಹೊರಗೆ ಬಂದಿದ್ದ. ಈ ವೇಳೆ ಆರೋಪಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪರೋಲ್ ಅವಧಿ ಮುಗಿದರು ಜೈಲಿಗೆ ವಾಪಸ್ಸಾಗದೆ ತಲೆ ಮರೆಸಿಕೊಂಡಿದ್ದ ಈತ ಪುಣೆಯ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ ನಡೆಸುತ್ತಿದ್ದ. ಈ ವೇಳೆ ಆರೋಪಿ ಮತ್ತು ಸಹಚರರನ್ನು ಜ.22ರಂದು ಬಂಧಿಸಲಾಗಿದ್ದು. ತನಿಖೆ ವೇಳೆ ಈತ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಎನ್ನುವುದು ಗೊತ್ತಾಯಿತು. ಈತ ತನ್ನ ಗ್ಯಾಂಗ್ನೊಂದಿಗೆ ಗುಜರಾತ್ನ ಗೋಧ್ರಾದಿಂದ ಪುಣೆ ಜಿಲ್ಲೆಗೆ ಬಂದು ಕಳ್ಳತನ ನಡೆಸುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
2002 ಫೆ.22 ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್ಪ್ರೆಸ್ ಎಸ್-6 ಕೋಚ್ಗೆ ಬೆಂಕಿ ಹಚ್ಚಿ 59 ಮಂದಿಯನ್ನು ಕೊಂದ ಪ್ರಕರಣದಲ್ಲಿ ಆರೋಪಿ ಜರ್ದ ಮತ್ತು ಸಹಚರರು ದೋಷಿಗಳಾಗಿದ್ದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…