ನವದೆಹಲಿ: ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹೊಸ ವರ್ಷದಲ್ಲಿ 19 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರತಿ ವರ್ಷ ರೈತರಿಗೆ 6000 ರೂಗಳ ಆರ್ಥಿಕ ನೆರವು ನೀಡಲಾಗುವುದು. ಇದನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ಪಾವತಿಸಲಾಗುವುದು. ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ 18 ನೇ ಕಂತನ್ನು ಪಡೆಯದ ರೈತರಿಗೆ 19ನೇ ಕಂತಿನ ಜೊತೆಗೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇಕೆವೈಸಿ ಪೂರ್ಣಗೊಳಿಸದ ರೈತರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಇ-ಕೆವೈಸಿ ನವೀಕರಿಸಲು ಪಿಎಂ ಕಿಸಾನ್ ಸಮ್ಮಾನ್ ಅಧಿಕೃತ ವೆಬ್ಸೈಟ್ಗೆ ಹೋಗಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಭೂಮಿಯ ವಿವರಗಳನ್ನು ನಮೂದಿಸಿ ಎಂದು ಮಾಹಿತಿ ನೀಡಲಾಗಿದೆ.
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…