ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪನಾಯಕನಾಗಿ ಗೌರವ್ ಗೊಗೋಯ್ ನೇಮಕಗೊಂಡಿದ್ದಾರೆ.
ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್ ಗೊಗೋಯ್ ಪುತ್ರ ಗೌರವ್ ಗೊಗೋಯ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಲು ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 2020ರಲ್ಲೂ ಕೂಡ ಗೌರವ್ ಗೊಗೋಯ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.
ಗೌರವ್ ಗೊಗೋಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ. ಚುನಾವಣೆಯಲ್ಲಿ 1,44,393 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗೌರವ್ ಗೊಗೋಯ್ ಅವರು ಸಾಮಾನ್ಯವಾಗಿ ಸಂಸತ್ತಿನಲ್ಲಿ ಕಾಂಗ್ರೆಸ್ ಪರವಾಗಿ ಪಕ್ಷದ ಚರ್ಚೆಗಳಲ್ಲಿ ಭಾಗವಹಿಸುತ್ತಾರೆ.
ಮುಖ್ಯ ಸಚೇತಕರಾಗಿ ಕೋಡಿಕುನ್ನಿಲ್ ಸುರೇಶ್ ಆಯ್ಕೆಯಾಗಿದ್ದಾರೆ. ಸಂಸದರಾದ ಮಾಣಿಕ್ಯಂ ಟ್ಯಾಗೋರ್ ಮತ್ತು ಎಂ.ಡಿ.ಜವೈದ್ ಅವರನ್ನು ಸಚೇತಕರನ್ನಾಗಿ ಮತ್ತು ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…