ದೇಶ- ವಿದೇಶ

ಲೋಕಸಭೆಯಲ್ಲಿ ಕಾಂಗ್ರೆಸ್‌ ಉಪನಾಯಕನಾಗಿ ಗೌರವ್‌ ಗೊಗೋಯ್‌ ನೇಮಕ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್‌ ಗೊಗೋಯ್‌ ನೇಮಕಗೊಂಡಿದ್ದಾರೆ.

ರಾಹುಲ್‌ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್‌ ಗೊಗೋಯ್‌ ಪುತ್ರ ಗೌರವ್‌ ಗೊಗೋಯ್‌ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಲು ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. 2020ರಲ್ಲೂ ಕೂಡ ಗೌರವ್‌ ಗೊಗೋಯ್‌ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.

ಗೌರವ್‌ ಗೊಗೋಯ್‌ ಅಸ್ಸಾಂನ ಜೋರ್ಹತ್‌ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ. ಚುನಾವಣೆಯಲ್ಲಿ 1,44,393 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗೌರವ್‌ ಗೊಗೋಯ್‌ ಅವರು ಸಾಮಾನ್ಯವಾಗಿ ಸಂಸತ್ತಿನಲ್ಲಿ ಕಾಂಗ್ರೆಸ್‌ ಪರವಾಗಿ ಪಕ್ಷದ ಚರ್ಚೆಗಳಲ್ಲಿ ಭಾಗವಹಿಸುತ್ತಾರೆ.

ಮುಖ್ಯ ಸಚೇತಕರಾಗಿ ಕೋಡಿಕುನ್ನಿಲ್‌ ಸುರೇಶ್‌ ಆಯ್ಕೆಯಾಗಿದ್ದಾರೆ. ಸಂಸದರಾದ ಮಾಣಿಕ್ಯಂ ಟ್ಯಾಗೋರ್‌ ಮತ್ತು ಎಂ.ಡಿ.ಜವೈದ್‌ ಅವರನ್ನು ಸಚೇತಕರನ್ನಾಗಿ ಮತ್ತು ಕೋಡಿಕುನ್ನಿಲ್‌ ಸುರೇಶ್‌ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago