ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪನಾಯಕನಾಗಿ ಗೌರವ್ ಗೊಗೋಯ್ ನೇಮಕಗೊಂಡಿದ್ದಾರೆ.
ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್ ಗೊಗೋಯ್ ಪುತ್ರ ಗೌರವ್ ಗೊಗೋಯ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಲು ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 2020ರಲ್ಲೂ ಕೂಡ ಗೌರವ್ ಗೊಗೋಯ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.
ಗೌರವ್ ಗೊಗೋಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ. ಚುನಾವಣೆಯಲ್ಲಿ 1,44,393 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗೌರವ್ ಗೊಗೋಯ್ ಅವರು ಸಾಮಾನ್ಯವಾಗಿ ಸಂಸತ್ತಿನಲ್ಲಿ ಕಾಂಗ್ರೆಸ್ ಪರವಾಗಿ ಪಕ್ಷದ ಚರ್ಚೆಗಳಲ್ಲಿ ಭಾಗವಹಿಸುತ್ತಾರೆ.
ಮುಖ್ಯ ಸಚೇತಕರಾಗಿ ಕೋಡಿಕುನ್ನಿಲ್ ಸುರೇಶ್ ಆಯ್ಕೆಯಾಗಿದ್ದಾರೆ. ಸಂಸದರಾದ ಮಾಣಿಕ್ಯಂ ಟ್ಯಾಗೋರ್ ಮತ್ತು ಎಂ.ಡಿ.ಜವೈದ್ ಅವರನ್ನು ಸಚೇತಕರನ್ನಾಗಿ ಮತ್ತು ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…