ದೇಶ- ವಿದೇಶ

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ ತಂಡದ ಆಟಗಾರ್ತಿಯರ ಸುರಕ್ಷತೆಗೆ ತೀವ್ರ ಕಳವಳ ವ್ಯಕ್ತವಾಗುತ್ತಿದೆ.

ತಂಡದ ಅಭಿಯಾನ ಮುಗಿದ ನಂತರ ಆಟಗಾರ್ತಿಯರು ತಿರುಗಿ ಇರಾನ್‌ಗೆ ಹೋದರೆ ಕಠಿಣ ಶಿಕ್ಷೆಯ ಭಯವಿದೆ ಎಂದು ಮಾನವ ಹಕ್ಕು ಸಂಘಟನೆಗಳು, ವಿಶ್ವ ವೃತ್ತಿಪರ ಫುಟ್ಬಾಲ್ ಆಟಗಾರರ ಅಂತರರಾಷ್ಟ್ರೀಯ ಒಕ್ಕೂಟ ಹಾಗೂ ಆಸ್ಟ್ರೇಲಿಯಾ ರಾಜಕಾರಣಿಗಳು ಎಚ್ಚರಿಸಿದ್ದಾರೆ. ಐದು ಆಟಗಾರ್ತಿಯರು ತಂಡದ ಹೋಟೆಲ್‌ನಿಂದ ತಪ್ಪಿಸಿಕೊಂಡು ಆಸ್ಟ್ರೇಲಿಯಾ ಪೊಲೀಸ್ ರಕ್ಷಣೆಯನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕೊರಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಇರಾನ್ ಆಟಗಾರ್ತಿಯರು ರಾಷ್ಟ್ರೀಯ ಗೀತೆಗೆ ಮೌನವಾಗಿ ನಿಂತು ಪ್ರತಿಭಟಿಸಿದ್ದರು. ಇದು ಇರಾನ್ ಶಾಸನದ ವಿರುದ್ಧದ ನಿಶ್ಶಬ್ದ ವಿರೋಧ ಎಂದು ವ್ಯಾಖ್ಯಾನಗೊಂಡಿತು. ಆದರೆ ನಂತರದ ಎರಡು ಪಂದ್ಯಗಳಲ್ಲಿ ಒತ್ತಾಯದಿಂದ ಗೀತೆ ಹಾಡಿ ಸಲ್ಯೂಟ್ ನೀಡಿದ್ದಾರೆ. ಇರಾನ್ ರಾಜ್ಯ ಟಿವಿ ಅವರನ್ನು ‘ಯುದ್ಧಕಾಲದ ದ್ರೋಹಿಗಳು’ (wartime traitors) ಎಂದು ಕರೆದು ತೀವ್ರ ಆರೋಪ ಹೊರಿಸಿದೆ. ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಾಮೆನೆಯಿ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ವಿರುದ್ಧದ ಒತ್ತಾಯ ಹೆಚ್ಚಾಗಿದೆ. ಹಿಜಾಬ್ ನಿಯಮ, ರಾಜಕೀಯ ಪ್ರತಿಭಟನೆಗಳು ಹಾಗೂ ಈ ಹಿಂದಿನ ಅಥ್ಲೀಟ್‌ಗಳ ಮೇಲಿನ ಹಲ್ಲೆಗಳ ಹಿನ್ನೆಲೆಯಲ್ಲಿ ಆಟಗಾರ್ತಿಯರಿಗೆ ಜೈಲು ಅಥವಾ ಮರಣದಂಡನೆಯ ಭಯ ಉಂಟಾಗಿದೆ.

ಪ್ರತಿಭಟನೆ, SOS ಸಿಗ್ನಲ್‌ ಪ್ರದರ್ಶನೆ
ಫಿಲಿಪ್ಪೈನ್ಸ್ ವಿರುದ್ಧದ ಕೊನೆಯ ಪಂದ್ಯದ ನಂತರ ತಂಡದ ಬಸ್ ಅನ್ನು ನೂರಾರು ಇರಾನ್ ವಿರೋಧಿ ಪ್ರತಿಭಟನಾಕಾರರು ಸುತ್ತುವರೆದು “ನಮ್ಮ ಹುಡುಗಿಯರನ್ನು ರಕ್ಷಿಸಿ” (Save our girls) ಎಂದು ಘೋಷಣೆ ಕೂಗಿದರು. ಬಸ್‌ನಲ್ಲಿದ್ದ ಆಟಗಾರ್ತಿಯರು ಕಿಟಕಿಯಿಂದ SOS ಸಂಕೇತ ಮಾಡಿ ಫೋಟೋಗಳನ್ನು ತೆಗೆದಿದ್ದಾರೆ ಎಂದು ವರದಿಯಾಗಿವೆ. ಬಸ್ ಗೋಲ್ಡ್ ಕೋಸ್ಟ್ ಹೋಟೆಲ್‌ಗೆ ತಲುಪಿದ ನಂತರ ಆಟಗಾರ್ತಿಯರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ತಂಡದ ಮ್ಯಾನೇಜರ್ ಮಾರ್ಜಿಯೆ ಜಾಫರಿ “ನಾವು ತ್ವರಿತವಾಗಿ ತಿರುಗಿ ಬರಲು ಆತುರರಾಗಿದ್ದೇವೆ” ಎಂದು ಹೇಳಿದ್ದಾರೆ ಆದರೆ ಇದು ಒತ್ತಾಯದಿಂದ ಇರಬಹುದು ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

ಐದು ಆಟಗಾರ್ತಿಯರು ಪಲಾಯನ
ಇಂದು(ಮಾರ್ಚ್‌ 9) ಐದು ಆಟಗಾರ್ತಿಯರು ಹೋಟೆಲ್‌ನಿಂದ ತಪ್ಪಿಸಿಕೊಂಡು ಆಸ್ಟ್ರೇಲಿಯಾ ಪೊಲೀಸ್ ರಕ್ಷಣೆಯಲ್ಲಿ ಸುರಕ್ಷಿತರಾಗಿದ್ದಾರೆ. ವಿಶ್ವ ವೃತ್ತಿಪರ ಫುಟ್ಬಾಲ್ ಆಟಗಾರರ ಅಂತರರಾಷ್ಟ್ರೀಯ ಒಕ್ಕೂಟ, ಏಷ್ಯಾ/ಓಷಿಯಾನಿಯಾ ಅಧ್ಯಕ್ಷ ಬ್ಯೂ ಬುಷ್ “ಆಟಗಾರ್ತಿಯರೊಂದಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ. ಇದು ಅತ್ಯಂತ ಕಳವಳಕಾರಿ” ಎಂದು ಹೇಳಿದ್ದಾರೆ. ಅಮ್ನೆಸ್ಟಿ ಇಂಟರ್ನ್ಯಾಷನಲ್‌ನ ಝಕಿ ಹೈದರಿ “ಅವರು ಇರಾನ್‌ಗೆ ತಿರುಗಿ ಹೋದರೆ ಗಂಭೀರ ಅಪಾಯ” ಎಂದು ಎಚ್ಚರಿಸಿದ್ದಾರೆ. ಇರಾನ್ ರಾಷ್ಟ್ರೀಯ ಮಹಿಳಾ ತಂಡದ ಆಟಗಾರ್ತಿಯರ ಸುರಕ್ಷತೆಗೆ ಆಸ್ಟ್ರೇಲಿಯಾ ಸರ್ಕಾರ, FIFA ಹಾಗೂ AFC ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ವಿಶ್ವದಾದ್ಯಂತ ಒತ್ತಾಯ ವ್ಯಕ್ತವಾಗುತ್ತಿದೆ.

ಕರೆಗೆ ಧ್ವನಿಗೂಡಿಸಿದ ಟ್ರಂಪ್!
ಕಳೆದ ವಾರ ಏಷ್ಯನ್ ಕಪ್ ಟೂರ್ನಮೆಂಟ್ ಪಂದ್ಯಕ್ಕೂ ಮುನ್ನ ಇರಾನಿನ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ನಂತರ ಸ್ವದೇಶಕ್ಕೆ ಮರಳಲು ತಯಾರಾದ ಇರಾನಿನ ಮಹಿಳಾ ಫುಟ್ಬಾಲ್ ತಂಡಕ್ಕೆ ಆಸ್ಟ್ರೇಲಿಯಾ ಆಶ್ರಯ ನೀಡಬೇಕೆಂಬ ಹೆಚ್ಚುತ್ತಿರುವ ಕರೆಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸೇರಿಕೊಂಡಿದ್ದಾರೆ. ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಆಸ್ಟ್ರೇಲಿಯಾ ಫುಟ್ಬಾಲ್ ತಂಡವನ್ನು ಇರಾನ್‌ಗೆ ಬಲವಂತವಾಗಿ ಹಿಂತಿರುಗಿಸಲು ಅವಕಾಶ ನೀಡುವ ಮೂಲಕ ಭಯಾನಕ ಮಾನವೀಯ ತಪ್ಪನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಅವರು ಹೆಚ್ಚಾಗಿ ಕೊಲ್ಲಲ್ಪಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಆಶ್ರಯ ನೀಡುವಂತೆ ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

2 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

4 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

4 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

5 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

5 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

6 hours ago