ದೇಶ- ವಿದೇಶ

ನವರಾತ್ರಿಗೆ ಒಂದು ದಿನ ಮೊದಲು ಜಿಎಸ್‌ಟಿ ಕಡಿತ: ಪ್ರಧಾನಿ ನರೇಂದ್ರ ಮೋದಿ

ಅಸ್ಸಾಂ: ದೇಶದ ಜನತೆಗೆ ನವರಾತ್ರಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಜಿಎಸ್‌ಟಿ ಪ್ರಮಾಣದಲ್ಲಿ ಸಾಕಷ್ಟು ಕಡಿತ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅಸ್ಸಾಂನ ದರ್ಯಾಂಗ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಕಡಿತದ ಸಿಹಿಸುದ್ದಿಯೊಂದಿಗೆ ಬಂದಿದ್ದೇನೆ. ನವರಾತ್ರಿ ಆರಂಭಕ್ಕೂ ಒಂದು ದಿನ ಮುನ್ನ ಜಿಎಸ್‌ಟಿ ಕಡಿತವಾಗಲಿದೆ. ಕಾರು, ಬೈಕ್‌, ಮಾತ್ರೆಗಳು ಹಾಗೂ ಅಗತ್ಯ ವಸ್ತುಗಳ ದರ ಕಡಿಮೆಯಾಗಲಿದೆ ಎಂದು ಹೇಳಿದರು.

ಇದನ್ನು ಓದಿ : ಮೈಸೂರು ದಸರಾದಲ್ಲಿ ಎಲ್ಲರೂ ಭಾಗವಹಿಸಿ: ಸಚಿವ ಎಚ್.ಸಿ.ಮಹದೇವಪ್ಪ

ಇದೇ ವೇಳೆ ಜನರು ಹೆಚ್ಚು ದೇಶಿ ನಿರ್ಮಿತ ವಸ್ತುಗಳನ್ನು ಖರೀದಿಸಬೇಕು. ಭಾರತದಲ್ಲಿ ತಯಾರಿಸಲ್ಟಟ್ಟ ವಸ್ತುಗಳನ್ನು ಖರೀದಿ ಮಾಡುವಂತೆ ಕರೆ ನೀಡಿದರು.

ದೇಶದ ಅಭಿವೃದ್ಧಿಯಲ್ಲಿ ಅಸ್ಸಾಂ ಪಾತ್ರ ಮಹತ್ವದ್ದಾಗಿದೆ. ಕಾಂಗ್ರೆಸ್‌ ಅಹಂಕಾರಿ ಪಕ್ಷವಾಗಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಈಶಾನ್ಯ ರಾಜ್ಯಗಳನ್ನು ಕಡೆಗಣಿಸಿದೆ. ಕಾಂಗ್ರೆಸ್‌ನ 60 ವರ್ಷಗಳ ಆಡಳಿತದಲ್ಲಿ ಕೇವಲ 3 ಬ್ರಿಡ್ಜ್‌ಗಳನ್ನು ಮಾತ್ರ ನಿರ್ಮಿಸಲಾಗಿದೆ. ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಕೇವಲ ಮೂರು ಸೇತುವೆಗಳನ್ನು ನಿರ್ಮಿಸಲಾಗಿದೆ. ಎನ್‌ಡಿಎ ಆಡಳಿತದ 10 ವರ್ಷಗಳ ಅವಧಿಯಲ್ಲಿ 6 ಸೇತುವೆಗಳನ್ನು ನಿರ್ಮಿಸಲಾಗಿದೆ. ಇದು ಡಬಲ್‌ ಇಂಜಿನ್‌ ಸರ್ಕಾರ. ದೇದ ಅಭಿವೃದ್ಧಿಗೆ ರಸ್ತೆ, ರೈಲು, ವಿಮಾನ ಸಂಪರ್ಕ ಪ್ರಮುಖವಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago