gst
ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿದ ಹಿನ್ನಲೆಯಲ್ಲಿ ನಾಳೆಯಿಂದ ದೇಶದದ್ಯಾಂತ ದಿನನಿತ್ಯ ಬಳಸುವ ಹಾಲಿನಿಂದ ಹಿಡಿದು ಟೂತ್ಪೇಸ್ಟ್ವರೆಗೆ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಇದು ಮಧ್ಯಮ ವರ್ಗದ ಜನರಿಗೆ ದೊಡ್ಡ ಮಟ್ಟದ ನೆರವು ನೀಡುವುದಂತೂ ಖಚಿತವಾಗಿದೆ.
ಹಾಲು, ತುಪ್ಪ, ಪನೀರ್ನಂತಹ ಡೈರಿ ಉತ್ಪನ್ನಗಳು ಇನ್ಮುಂದೆ ಅಗ್ಗವಾಗಲಿವೆ. ಈ ಮೊದಲು 1 ಲೀಟರ್ ಟೆಟ್ರಾ ಪ್ಯಾಕ್ ಹಾಲು 77 ರೂ. ಇತ್ತು. ಇನ್ನು ಮುಂದೆ ಇದು ಕೇವಲ 75 ರೂ ಗೆ ಸಿಗಲಿದೆ.
ಕೇವಲ ಆಹಾರ ಪದಾರ್ಥಗಳು ಮಾತ್ರವಲ್ಲ, ಮನೆಯಲ್ಲಿ ಪ್ರತಿದಿನ ಬಳಸುವ ಸೋಪು, ಡಿಟರ್ಜೆಂಟ್, ಟೂತ್ಪೇಸ್ಟ್, ಶಾಂಪೂ, ಹೇರ್ ಆಯಿಲ್ನಂತಹ ಶೇ.99ರಷ್ಟು ವಸ್ತುಗಳ ಮೇಲಿನ ಜಿಎಸ್ಟಿಯನ್ನು ಶೇ.12ರಿಂದ ನೇರವಾಗಿ ಶೇ.5ಕ್ಕೆ ಇಳಿಸಲಾಗಿದೆ.
ಸೋಪಿನಿಂದ ಕಾರಿನ ತನಕ, ಟ್ರ್ಯಾಕ್ಟರ್ನಿಂದ ಹವಾ ನಿಯಂತ್ರಕಗಳವರೆಗೆ ಒಟ್ಟು 400 ಉತ್ಪನ್ನಗಳ ಬೆಲೆ ಕಡಿತವಾಗಲಿದೆ. ನಿತ್ಯ ಬಳಸುವ ಆಹಾರ, ಗೃಹೋಪಯೋಗಿ ಉತ್ಪನ್ನಗಳು ಶೇ.5 ತೆರಿಗೆ ವ್ಯಾಪ್ತಿಗೆ ಬರುತ್ತವೆ. ಹಾಲು, ಬ್ರೆಡ್ ಮತ್ತು ಪನ್ನೀರ್ನಂತಹ ಉತ್ಪನ್ನಗಳಿಗೆ ಯಾವುದೇ ತೆರಿಗೆ ಇಲ್ಲ. ಪರಿಷ್ಕೃತ ದರಗಳು ನವರಾತ್ರಿಯ ಮೊದಲು ದಿನ ಅಂದರೆ ನಾಳೆಯಿಂದ ಜಾರಿಗೆ ಬರುತ್ತವೆ.
ಮಾರುಕಟ್ಟೆಯಲ್ಲಿ ಈಗಾಗಲೇ ಇರುವ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿರುವ ಔಷಧಗಳನ್ನು ಹಿಂಪಡೆದು ಹೊಸ ಲೇಬಲ್ನೊಂದಿಗೆ ಮತ್ತೆ ಬಿಡುಗಡೆ ಮಾಡುವ ಅವಶ್ಯಕತೆ ಇಲ್ಲ. ಆದರೆ ಈ ಉತ್ಪನ್ನಗಳ ತಯಾರಕರು ಮತ್ತು ಮಾರ್ಕೆಟಿಂಗ್ ಕಂಪನಿಗಳು ಚಿಲ್ಲರೆ ಮಾರಾಟವು ಪರಿಷ್ಕೃತ ದರದಲ್ಲಿಮಾರಾಟವಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (ಎನ್ಪಿಪಿಎ) ಆದೇಶಿಸಿದೆ.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…