ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆ: ನಾಳೆಯಿಂದ ಬಹುತೇಕ ವಸ್ತುಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿದ ಹಿನ್ನಲೆಯಲ್ಲಿ ನಾಳೆಯಿಂದ ದೇಶದದ್ಯಾಂತ ದಿನನಿತ್ಯ ಬಳಸುವ ಹಾಲಿನಿಂದ ಹಿಡಿದು ಟೂತ್‌ಪೇಸ್ಟ್‌ವರೆಗೆ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಇದು ಮಧ್ಯಮ ವರ್ಗದ ಜನರಿಗೆ ದೊಡ್ಡ ಮಟ್ಟದ ನೆರವು ನೀಡುವುದಂತೂ ಖಚಿತವಾಗಿದೆ.

ಹಾಲು, ತುಪ್ಪ, ಪನೀರ್‍ನಂತಹ ಡೈರಿ ಉತ್ಪನ್ನಗಳು ಇನ್ಮುಂದೆ ಅಗ್ಗವಾಗಲಿವೆ. ಈ ಮೊದಲು 1 ಲೀಟರ್ ಟೆಟ್ರಾ ಪ್ಯಾಕ್ ಹಾಲು 77 ರೂ. ಇತ್ತು. ಇನ್ನು ಮುಂದೆ ಇದು ಕೇವಲ 75 ರೂ ಗೆ ಸಿಗಲಿದೆ.

ಕೇವಲ ಆಹಾರ ಪದಾರ್ಥಗಳು ಮಾತ್ರವಲ್ಲ, ಮನೆಯಲ್ಲಿ ಪ್ರತಿದಿನ ಬಳಸುವ ಸೋಪು, ಡಿಟರ್ಜೆಂಟ್, ಟೂತ್‍ಪೇಸ್ಟ್, ಶಾಂಪೂ, ಹೇರ್ ಆಯಿಲ್‍ನಂತಹ ಶೇ.99ರಷ್ಟು ವಸ್ತುಗಳ ಮೇಲಿನ ಜಿಎಸ್‍ಟಿಯನ್ನು ಶೇ.12ರಿಂದ ನೇರವಾಗಿ ಶೇ.5ಕ್ಕೆ ಇಳಿಸಲಾಗಿದೆ.

ಸೋಪಿನಿಂದ ಕಾರಿನ ತನಕ, ಟ್ರ್ಯಾಕ್ಟರ್‌ನಿಂದ ಹವಾ ನಿಯಂತ್ರಕಗಳವರೆಗೆ ಒಟ್ಟು 400 ಉತ್ಪನ್ನಗಳ ಬೆಲೆ ಕಡಿತವಾಗಲಿದೆ. ನಿತ್ಯ ಬಳಸುವ ಆಹಾರ, ಗೃಹೋಪಯೋಗಿ ಉತ್ಪನ್ನಗಳು ಶೇ.5 ತೆರಿಗೆ ವ್ಯಾಪ್ತಿಗೆ ಬರುತ್ತವೆ. ಹಾಲು, ಬ್ರೆಡ್ ಮತ್ತು ಪನ್ನೀರ್‌ನಂತಹ ಉತ್ಪನ್ನಗಳಿಗೆ ಯಾವುದೇ ತೆರಿಗೆ ಇಲ್ಲ. ಪರಿಷ್ಕೃತ ದರಗಳು ನವರಾತ್ರಿಯ ಮೊದಲು ದಿನ ಅಂದರೆ ನಾಳೆಯಿಂದ ಜಾರಿಗೆ ಬರುತ್ತವೆ.

ಮಾರುಕಟ್ಟೆಯಲ್ಲಿ ಈಗಾಗಲೇ ಇರುವ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿರುವ ಔಷಧಗಳನ್ನು ಹಿಂಪಡೆದು ಹೊಸ ಲೇಬಲ್‍ನೊಂದಿಗೆ ಮತ್ತೆ ಬಿಡುಗಡೆ ಮಾಡುವ ಅವಶ್ಯಕತೆ ಇಲ್ಲ. ಆದರೆ ಈ ಉತ್ಪನ್ನಗಳ ತಯಾರಕರು ಮತ್ತು ಮಾರ್ಕೆಟಿಂಗ್ ಕಂಪನಿಗಳು ಚಿಲ್ಲರೆ ಮಾರಾಟವು ಪರಿಷ್ಕೃತ ದರದಲ್ಲಿಮಾರಾಟವಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (ಎನ್‍ಪಿಪಿಎ) ಆದೇಶಿಸಿದೆ.

ಆಂದೋಲನ ಡೆಸ್ಕ್

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

2 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

5 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

5 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

5 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

5 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

9 hours ago