ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆಯಿಂದ ದೇಶದ ಬೆಳವಣಿಗೆಗೆ ವೇಗ : ಪ್ರಧಾನಿ ಮೋದಿ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago