ಹೊಸದಿಲ್ಲಿ : ಜಿಎಸ್ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್ಟಿ ಉತ್ಸವ ಆರಂಭವಾಗಲಿದೆ. ಜಿಎಸ್ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.
GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.
ಒನ್ ನೇಷನ್, ಒನ್ ಟ್ಯಾಕ್ಸ್’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.
ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…