ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆಯಿಂದ ದೇಶದ ಬೆಳವಣಿಗೆಗೆ ವೇಗ : ಪ್ರಧಾನಿ ಮೋದಿ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

5 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

5 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

5 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

9 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

10 hours ago