ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆಯಿಂದ ದೇಶದ ಬೆಳವಣಿಗೆಗೆ ವೇಗ : ಪ್ರಧಾನಿ ಮೋದಿ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago