ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆಯಿಂದ ದೇಶದ ಬೆಳವಣಿಗೆಗೆ ವೇಗ : ಪ್ರಧಾನಿ ಮೋದಿ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

18 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

18 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

18 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

18 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago