ದೇಶ- ವಿದೇಶ

ಜಿಎಸ್‌ಟಿ ಪರಿಷ್ಕರಣೆಯಿಂದ ದೇಶದ ಬೆಳವಣಿಗೆಗೆ ವೇಗ : ಪ್ರಧಾನಿ ಮೋದಿ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸೆ.21 ರ ಸಂಜೆ 5 ಗಂಟೆಗೆ ರಾಷ್ಟವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

3 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

3 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

3 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

3 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

3 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

5 hours ago