ದೇಶ- ವಿದೇಶ

ಜಿಎಸ್‌ಟಿ | ಪರಿಷ್ಕರಣೆಯಲ್ಲಿ ಯಾವುದೆಲ್ಲಾ ಅಗ್ಗ..? ಯಾವುದು ದುಬಾರಿ..?

ಹೊಸದಿಲ್ಲಿ : ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದ್ದು, ೮ ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನ ಕೆಂಪುಕೋಟೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಈ ಬಾರಿಯ ದೀಪಾವಳಿಯಲ್ಲಿ ಭಾರತೀಯರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದರು.

ಹಾಗಾಗಿ, ಬುಧವಾರದಂದು ಆರಂಭವಾದ ೨ ದಿನಗಳ ಜಿಎಸ್‌ಟಿ ಸಭೆಯ ಮೇಲೆ ಜನರಿಗೆ ಕುತೂಹಲ ಹೆಚ್ಚಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆದಿದ್ದು, ಎಲ್ಲಾ ರಾಜ್ಯಗಳ ಸಚಿವರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಜನಸಾಮಾನ್ಯರಿಗೆ ತೀರಾ ಅಗತ್ಯವಾದ ವಸ್ತುಗಳ ಬೆಲೆ ಅಗ್ಗವಾಗುವ ಸಾಧ್ಯತೆಯಿದೆ. ಜೊತೆಗೆ, ಐಷಾರಾಮಿ ವಸ್ತುಗಳ ಮೇಲೆ ತೆರಿಗೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಕರ್ನಾಟಕದ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಮಾತನಾಡಿ, ಜಿಎಸ್‌ಟಿ ತೆರಿಗೆ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದ ಆದಾಯದಲ್ಲಿ ವಾರ್ಷಿಕ ಸರಾಸರಿ ರೂ. ೭೦,೦೦೦ ಕೋಟಿ ಖೋತಾ ಆಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ದರ ಸರಳೀಕರಣ ಪ್ರಸ್ತಾವನೆಯಿಂದ ಹೆಚ್ಚುವರಿ ೧೫,೦೦೦ ಕೋಟಿ ಖೋತಾ ಆಗಲಿದೆ ಎನ್ನುವ ಆತಂಕವನ್ನು ವ್ಯಕ್ತಪಡಿಸಿದ್ದರು.

ಎರಡು ದಿನಗಳ ಕೌನ್ಸಿಲ್ ಸಭೆಯಲ್ಲಿ ತೆರಿಗೆ ದರಗಳನ್ನು ಕಮ್ಮಿ ಮಾಡುವ ನಿಟ್ಟಿನಲ್ಲಿ ಚರ್ಚೆಯಾಗಲಿದೆ. ಮೊದಲಿಗೆ, ಐದು ಮತ್ತು ಹದಿನೆಂಟು ಸ್ಲ್ಯಾಬ್ ನಲ್ಲಿರುವ ವಸ್ತುಗಳ ಬಗ್ಗೆ ಚರ್ಚೆ ನಡೆಯಲಿದೆ. ಮೂಲಗಳ ಪ್ರಕಾರ, ಐಷಾರಾಮಿ ವಸ್ತುಗಳು ಇನ್ನಷ್ಟು ದುಬಾರಿಯಾಗಬಹುದು.

ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಈಗಾಗಲೇ ಚರ್ಚೆಯ ಮೇಜಿನ ಮೇಲಿದೆ. ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ ಒಪ್ಪಿಗೆಯ ನಂತರ ಹೊಸ ದರಗಳ ಕುರಿತಾದ ಅಧಿಸೂಚನೆಗಳು ೫-೭ ದಿನಗಳಲ್ಲಿ ಜಾರಿಗೊಳ್ಳಬಹುದು. ಹೊಸ ನಿಯಮಗಳು ಸೆಪ್ಟೆಂಬರ್ ೨೨ ರಿಂದ ಜಾರಿಗೆ ಬರುವ ಸಾಧ್ಯತೆ ಇದೆ.

ನಾಲ್ಕು ಸ್ಲ್ಯಾಬ್‌ಗಳ ಬದಲು ಎರಡು ಸ್ಲ್ಯಾಬ್‌ಗಳಿಗೆ ಇಳಿಕೆಗೆ ಕೇಂದ್ರ ಮುಂದಾಗಿದೆ. ಶೇ.೫, ಶೇ.೧೨, ಶೇ.೧೮. ಶೇ.೨೮ ತೆರಿಗೆ ಪದ್ದತಿಗೆ ಪೂರ್ಣ ವಿರಾಮ ಹಾಕಿ, ಶೇ. ೫% ಮತ್ತು ಶೇ.೧೮ ಸ್ಲ್ಯಾಬ್‌ಗಳನ್ನು ಉಳಿಸಿಕೊಳ್ಳಲು ಈಗಾಗಲೇ ಕೇಂದ್ರ ನಿರ್ಧರಿಸಿದೆ. ಶೇ. ೧೨% ವ್ಯಾಪ್ತಿಯಲ್ಲಿರುವ ಎಲ್ಲ ವಸ್ತುಗಳು ಶೇ. ೫ಕ್ಕೆ ಮತ್ತು ಶೇ.೨೮ರಲ್ಲಿರುವ ಎಲ್ಲ ವಸ್ತುಗಳ ತೆರಿಗೆಯನ್ನು ಶೇ. ೧೮ ಇಳಿಸಲು ತಿರ್ಮಾನಿಸಲಾಗಿದೆ. ಈ ಬಗ್ಗೆ ಈಗಾಗಲೇ ಸುಳಿವು ಕೂಡ ಸಿಕ್ಕಿದೆ.

ವಿಶೇಷ ವಿನಾಯಿತಿಗಳು
ಆರೋಗ್ಯ ಮತ್ತು ಜೀವ ವಿಮೆ :
ವೈಯಕ್ತಿಕ ಆರೋಗ್ಯ ಮತ್ತು ಜೀವ ವಿಮೆಯ ಮೇಲಿನ ಜಿಎಸ್‌ಟಿಯನ್ನು ಸಂಪೂರ್ಣವಾಗಿ ತೆಗೆದುಹಾಕುವ ಪ್ರಸ್ತಾವನೆ ಇದೆ. ಇದರಿಂದ ವಿಮಾ ಪ್ರೀಮಿಯಂಗಳ ಬೆಲೆ ಗಣನೀಯವಾಗಿ ಕಡಿಮೆಯಾಗಬಹುದು, ವಿಶೇಷವಾಗಿ ಮಧ್ಯಮ ವರ್ಗದವರಿಗೆ ಇದು ದೊಡ್ಡ ಉಳಿತಾಯವನ್ನು ಒದಗಿಸುತ್ತದೆ.

ಕೃಷಿ, ಜವಳಿ, ಫಲವತ್ತತೆ, ನವೀಕರಿಸಬಹುದಾದ ಶಕ್ತಿ, ಆರೋಗ್ಯ, ಕರಕುಶಲ ವಸ್ತುಗಳು, ಸಾರಿಗೆ : ಈ ಕ್ಷೇತ್ರಗಳಲ್ಲಿನ ಉತ್ಪನ್ನಗಳು ೫% ಸ್ಲ್ಯಾಬ್‌ಗೆ ಸ್ಥಳಾಂತರಗೊಂಗಲಿವೆ, ಇದರಿಂದ ರೈತರು, ಕಿರು-ಸಣ್ಣ ಉದ್ದಿಮೆಗಳು ಮತ್ತು ಸಾಮಾನ್ಯ ಗ್ರಾಹಕರಿಗೆ ಪ್ರಯೋಜನವಾಗಲಿದೆ.

ಯಾವುದಕ್ಕೆ ತೆರಿಗೆ ಇಲ್ಲ
* ತಾಜಾ ಹಾಲು, ತಾಜಾ ಹಣ್ಣುಗಳು ಮತ್ತು ತರಕಾರಿಗಳು (ಬ್ರ್ಯಾಂಡ್ ಇಲ್ಲದವು)
* ಅಕ್ಕಿ, ಗೋಧಿ, ರಾಗಿ ಮತ್ತು ಇತರ ಧಾನ್ಯಗಳು (ಬ್ರ್ಯಾಂಡ್ ಇಲ್ಲದವು)
* ಮಾಂಸ, ಮೀನು (ಪ್ಯಾಕ್ ಮಾಡದವು)
* ನೈಸರ್ಗಿಕ ಜೇನು (ಬ್ರ್ಯಾಂಡ್ ಇಲ್ಲದವು)
* ಸಿಂಧೂರ, ಕಂಕಣ, ಬಳೆಗಳು
* ಸ್ಯಾನಿಟರಿ ನ್ಯಾಪ್‌ಕಿನ್‌ಗಳು
* ಪುಸ್ತಕಗಳು, ಸ್ಲೇಟ್‌ಗಳು, ಪೆನ್ಸಿಲ್‌ಗಳು (ಶೈಕ್ಷಣಿಕ)

ಸೇವೆಗಳು
* ಆರೋಗ್ಯ ಸೇವೆಗಳು (ಆಸ್ಪತ್ರೆಗಳು, ಚಿಕಿತ್ಸೆ)
* ಶಿಕ್ಷಣ ಸೇವೆಗಳು (ಶಾಲೆ, ಕಾಲೇಜುಗಳು)

ಯಾವ ವಸ್ತುಗಳ ಬೆಲೆಯಲ್ಲಿ ನಿರೀಕ್ಷೆ ಮಾಡಬಹುದು?
೧. ಆಹಾರ ಉತ್ಪನ್ನಗಳು: ಪ್ಯಾಕ್ ಮಾಡಿದ ಒಣಗಿದ ಹಣ್ಣುಗಳು, ಫ್ರೂಟ್ ಜ್ಯೂಸ್, ದೇಶೀ ಸಿಹಿತಿಂಡಿಗಳು, ಗೃಹೋಪಯೋಗಿ ವಸ್ತುಗಳು: ಛತ್ರಿಗಳು, ಕೃಷಿ ಉಪಕರಣಗಳು, ಕೆಲವು ರೀತಿಯ ಶೂಗಳು (೫೦೦ ರೂ.ಗಿಂತ ಹೆಚ್ಚಿನ ಬೆಲೆಯವು) ಇತರೆ: ಆಗರ‍್ಬತ್ತಿ, ಕೆಲವು ಇಟ್ಟಿಗೆಗಳು, ಕೆಲವು ರೀತಿಯ ಬಟ್ಟೆಗಳು (ಗಾರ್ಮೆಂಟ್ಸ್)
೨. ಗೃಹೋಪಯೋಗಿ ಉಪಕರಣಗಳು: ಏರ್ ಕಂಡಿಷನರ್‌ಗಳು (ಎಸಿ). ರೆಫ್ರಿಜರೇಟರ್‌ಗಳು, ಟಿವಿಗಳು (೩೨ ಇಂಚಿಗಿಂತ ದೊಡ್ಡವು), ಡಿಶ್‌ವಾಶಿಂಗ್ ಮೆಷಿನ್‌ಗಳು
೩. ದೈನಂದಿನ ಬಳಕೆಯ ವಸ್ತುಗಳು: ಟೂತ್‌ಪೇಸ್ಟ್, ಸಾಬೂನು, ಶಾಂಪೂ, ಕಾಸ್ಮೆಟಿಕ್ಸ್ (ಕೆಲವು ರೀತಿಯವು, ಹೇರ್ ಆಯಿಲ್)

ಇತರೆ
* ಸಿಮೆಂಟ್
* ಪೇಂಟ್ ಮತ್ತು ವಾರ್ನಿಷ್
* ಸೆರಾಮಿಕ್ ಟೈಲ್ಸ್
* ಸ್ಯಾನಿಟರಿ ವೇರ್
* ಕೆಲವು ಎಲೆಕ್ಟ್ರಾನಿಕ್ಸ್ ವಸ್ತುಗಳು (ಕಂಪ್ಯೂಟರ್ ಮಾನಿಟರ್‌ಗಳು, ಪ್ರಿಂಟರ್‌ಗಳು)

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

59 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago