ದೇಶ- ವಿದೇಶ

ಗುಜರಾತ್:‌ ನಾಳೆ ʼಒಂದೇ ಮೆಟ್ರೋʼಗೆ ಮೋದಿ ಚಾಲನೆ

ನವದೆಹಲಿ: ದೇಶದ ಪ್ರಥಮ ಆತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ʼವಂದೇ ಮೆಟ್ರೋʼ ರೈಲಿಗೆ ಗುಜರಾತ್‌ನ ಭುಜ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಅಹಮದಾಬಾದ್‌ನಿಂದ ವರ್ಚುವಲ್‌ ಆಗಿ ಚಾಲನೆ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರೈಲ್ವೆ ಸಚಿವಾಲಯ, ವಂದೇ ಮೆಟ್ರೊ ರೈಲು ಸುಮಾರು 359 ಕಿ.ಮೀ.ದೂರದ ಪ್ರಯಾಣವನ್ನು 5.45 ಗಂಟೆಗಳಲ್ಲಿ ತಲುಪಲಿದೆ. ಈ ರೈಲು ಭೂಜ್‌ನಿಂದ ಹೊರಟಯ ಅಹಮದಾಬಾದ್‌ ತಲುಪಲಿದೆ. ರೈಲಿನ ಟಿಕೆಟ್‌ ದರ 455 ಆಗಿದ್ದು, ರೈಲಿನಲ್ಲಿ ಸಂಚಾರಿಸಲು ಸಾರ್ವಜನಿಕರಿಗೆ ಸೆ.17ರಿಂದ ಅನುವು ಮಾಡಿಕೊಡಲಾಗುವುದು. ಇದು ಗರಿಷ್ಠ 100 ಮೀ.ವೇಗದಲ್ಲಿ ಚಲಿಸುವ ರೈಲಾಗಿದ್ದು, ಪ್ರಯಾಣಿಕರ ಖರ್ಚುನ್ನು ತಗ್ಗಿಸಿ, ವೇಗದ ಪ್ರಯಾಣವನ್ನು ಖಚಿತಪಡಿಸುತ್ತದೆ ಹೇಳಿದೆ.

ಈ ರೈಲಿನಲ್ಲಿ ಅತ್ಯುತ್ತಮ ದರ್ಜೆಯ ಸೀಟುಗಳು, ಹವಾನಿಯಂತ್ರಿತ ಕ್ಯಾಬಿನ್‌, ಮಾಡ್ಯುಲರ್‌ ಇಂಟೀರಿಯರ್ಸ್‌ ಹೊಂದಿದ್ದು, ಇತರೆ ಮೆಟ್ರೋ ರೈಲುಗಳಿಗಿಂತ ಉನ್ನತ ದರ್ಜೆಯ ರೈಲಾಗಿದೆ. ಅಲ್ಲದೆ, ಅಪಘಾತದ ಸಂದರ್ಭದಲ್ಲಿ ತಡೆ ತಂತ್ರಜ್ಞಾನ ಕವಚ, ಬೆಂಕಿ ಅವಘಡ ಪತ್ತೆ ತಂತ್ರಜ್ಞಾನ, ತುರ್ತು ಲೈಟ್‌ಗಳು, ಏರೋಸಾಲ್‌ ಆಧಾರಿತ ಬೆಂಕಿ ನಂದಿಸುವ ವ್ಯವಸ್ಥೆಯಂತಹ ಆತ್ಯಾಧುನಿಕ ಸುರಕ್ಷತಾ ತಂತ್ರಜ್ಞಾನವನ್ನು ಒಳಗೊಂಡಿದೆ.

ವಂದೇ ಮೇಟ್ರೋ ರೈಲಿಗಿಂತ ಇತರೆ ಮೆಟ್ರೊ ರೈಲುಗಳು ಕಡಿಮೆ ಅಂತರದಲ್ಲಿ ಸಂಚರಿಸುತ್ತವೆ. ಮೆಟ್ರೋ ಎಂಬ ಪದ ನಗರದ ಭೂದೃಶ್ಯದ ಪರಿಕಲ್ಪನೆ ನೀಡಿದ್ದು, ಅದರಂತೆಯೇ ಈ ರೈಲು ನಗರದ ಹೃದ
ಯಭಾಗದಿಂದ ಬಾಹ್ಯ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago