ದೇಶ- ವಿದೇಶ

ಗುಜರಾತ್:‌ ನಾಳೆ ʼಒಂದೇ ಮೆಟ್ರೋʼಗೆ ಮೋದಿ ಚಾಲನೆ

ನವದೆಹಲಿ: ದೇಶದ ಪ್ರಥಮ ಆತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ʼವಂದೇ ಮೆಟ್ರೋʼ ರೈಲಿಗೆ ಗುಜರಾತ್‌ನ ಭುಜ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಅಹಮದಾಬಾದ್‌ನಿಂದ ವರ್ಚುವಲ್‌ ಆಗಿ ಚಾಲನೆ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರೈಲ್ವೆ ಸಚಿವಾಲಯ, ವಂದೇ ಮೆಟ್ರೊ ರೈಲು ಸುಮಾರು 359 ಕಿ.ಮೀ.ದೂರದ ಪ್ರಯಾಣವನ್ನು 5.45 ಗಂಟೆಗಳಲ್ಲಿ ತಲುಪಲಿದೆ. ಈ ರೈಲು ಭೂಜ್‌ನಿಂದ ಹೊರಟಯ ಅಹಮದಾಬಾದ್‌ ತಲುಪಲಿದೆ. ರೈಲಿನ ಟಿಕೆಟ್‌ ದರ 455 ಆಗಿದ್ದು, ರೈಲಿನಲ್ಲಿ ಸಂಚಾರಿಸಲು ಸಾರ್ವಜನಿಕರಿಗೆ ಸೆ.17ರಿಂದ ಅನುವು ಮಾಡಿಕೊಡಲಾಗುವುದು. ಇದು ಗರಿಷ್ಠ 100 ಮೀ.ವೇಗದಲ್ಲಿ ಚಲಿಸುವ ರೈಲಾಗಿದ್ದು, ಪ್ರಯಾಣಿಕರ ಖರ್ಚುನ್ನು ತಗ್ಗಿಸಿ, ವೇಗದ ಪ್ರಯಾಣವನ್ನು ಖಚಿತಪಡಿಸುತ್ತದೆ ಹೇಳಿದೆ.

ಈ ರೈಲಿನಲ್ಲಿ ಅತ್ಯುತ್ತಮ ದರ್ಜೆಯ ಸೀಟುಗಳು, ಹವಾನಿಯಂತ್ರಿತ ಕ್ಯಾಬಿನ್‌, ಮಾಡ್ಯುಲರ್‌ ಇಂಟೀರಿಯರ್ಸ್‌ ಹೊಂದಿದ್ದು, ಇತರೆ ಮೆಟ್ರೋ ರೈಲುಗಳಿಗಿಂತ ಉನ್ನತ ದರ್ಜೆಯ ರೈಲಾಗಿದೆ. ಅಲ್ಲದೆ, ಅಪಘಾತದ ಸಂದರ್ಭದಲ್ಲಿ ತಡೆ ತಂತ್ರಜ್ಞಾನ ಕವಚ, ಬೆಂಕಿ ಅವಘಡ ಪತ್ತೆ ತಂತ್ರಜ್ಞಾನ, ತುರ್ತು ಲೈಟ್‌ಗಳು, ಏರೋಸಾಲ್‌ ಆಧಾರಿತ ಬೆಂಕಿ ನಂದಿಸುವ ವ್ಯವಸ್ಥೆಯಂತಹ ಆತ್ಯಾಧುನಿಕ ಸುರಕ್ಷತಾ ತಂತ್ರಜ್ಞಾನವನ್ನು ಒಳಗೊಂಡಿದೆ.

ವಂದೇ ಮೇಟ್ರೋ ರೈಲಿಗಿಂತ ಇತರೆ ಮೆಟ್ರೊ ರೈಲುಗಳು ಕಡಿಮೆ ಅಂತರದಲ್ಲಿ ಸಂಚರಿಸುತ್ತವೆ. ಮೆಟ್ರೋ ಎಂಬ ಪದ ನಗರದ ಭೂದೃಶ್ಯದ ಪರಿಕಲ್ಪನೆ ನೀಡಿದ್ದು, ಅದರಂತೆಯೇ ಈ ರೈಲು ನಗರದ ಹೃದ
ಯಭಾಗದಿಂದ ಬಾಹ್ಯ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

12 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

12 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

14 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

14 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

14 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

15 hours ago