ದೇಶ- ವಿದೇಶ

ಜಾಗ್ವಾರ್ ಕಾರಿಗೆ ತಿರಂಗ ಬಣ್ಣ ಹಾಕಿಸಿರುವ ಯುವಕ

ದೆಹಲಿ :  ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್ ಮಾಡಿಸಿಕೊಂಡಿದ್ದಾನೆ.  ಸಿದ್ಧಾರ್ಥ್ ದೋಶಿ ತನ್ನ 71.60 ಲಕ್ಷ ರೂಪಾಯಿ ಜಾಗ್ವಾರ್ ಕಾರನ್ನು 2 ಲಕ್ಷ ರೂಪಾಯಿ ನೀಡಿ ಪೈಂಟ್ ಮಾಡಿಸಲಾಗಿದೆ. ಕೇಸರಿ, ಬಿಳಿ ಹಸಿರು ಬಣ್ಣ ಪೈಂಟ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಬಲ ನೀಡಲು ಈ ರೀತಿ ಮಾಡಿರುವುದಾಗಿ ಹೇಳಿದ್ದಾನೆ. ಸೂರತ್ ಮೂಲದ ಸಿದ್ದಾರ್ಥ್ ದೋಶಿ ತನ್ನ ಕಾರಿಗೆ ತಿರಂಗ ಪೈಂಟ್ಸ್ ಹಾಕಿಸಿಕೊಂಡು ಸೂರತ್‌ನಿಂದ ನೇರವಾಗಿ ದೆಹಲಿ ತಲುಪಿದ್ದಾನೆ. ಬಳಿಕ ಸಂಸತ್ ಮುಂಭಾಗದಲ್ಲಿ ತನ್ನತಿರಂಗ ಕಲರ್ ಕಾರಿನಲ್ಲಿ ತಿರುಗಾಡಿದ್ದಾನೆ.

ಅಜಾದಿ ಕಾ ಅಮೃತ ಮಹೋತ್ಸವ ಸಂಭ್ರಮದಲ್ಲಿ ಸಿದ್ದಾರ್ಥ್ ಗುಜರಾತ್‌ನ ಸೂರತ್‌ನಲ್ಲಿ ತಿರಂಗ ಪೈಂಟ್ಸ್ ಮಾಡಿಸಿಕೊಂಡಿದ್ದಾನೆ. ಬಳಿಕ ಸೂರತ್‌ನಿಂದ ದೆಹಲಿಗೆ ಅಂದರೆ 1157 ಕಿಲೋಮೀಟರ್ ತನ್ನ ಜಾಗ್ವಾರ್ ಕಾರಿನಲ್ಲಿ ಪ್ರಯಾಣ ಮಾಡಿದ್ದಾನೆ. ತನ್ನ ಸ್ನೇಹಿತನ ಜೊತೆ ಪ್ರಯಾಣ ಮಾಡಿದ ಸಿದ್ದಾರ್ಥ್ ದಾರಿಯುದ್ದಕ್ಕೂ ತಿರಂಗ ಹಾರಾಡಿಸುತ್ತಾ ಪ್ರಯಾಣ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದ ಮುಂದೆ ಜಾಗ್ವಾರ್ ಕಾರಿನಲ್ಲಿ ತಿರುಗಾಡಿ ತನ್ನ ಸಂತಸ ಹಂಚಿಕೊಂಡಿದ್ದಾನೆ.

andolana

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

7 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

8 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

8 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

9 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

9 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

10 hours ago