ದೆಹಲಿ : ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್ ಮಾಡಿಸಿಕೊಂಡಿದ್ದಾನೆ. ಸಿದ್ಧಾರ್ಥ್ ದೋಶಿ ತನ್ನ 71.60 ಲಕ್ಷ ರೂಪಾಯಿ ಜಾಗ್ವಾರ್ ಕಾರನ್ನು 2 ಲಕ್ಷ ರೂಪಾಯಿ ನೀಡಿ ಪೈಂಟ್ ಮಾಡಿಸಲಾಗಿದೆ. ಕೇಸರಿ, ಬಿಳಿ ಹಸಿರು ಬಣ್ಣ ಪೈಂಟ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಬಲ ನೀಡಲು ಈ ರೀತಿ ಮಾಡಿರುವುದಾಗಿ ಹೇಳಿದ್ದಾನೆ. ಸೂರತ್ ಮೂಲದ ಸಿದ್ದಾರ್ಥ್ ದೋಶಿ ತನ್ನ ಕಾರಿಗೆ ತಿರಂಗ ಪೈಂಟ್ಸ್ ಹಾಕಿಸಿಕೊಂಡು ಸೂರತ್ನಿಂದ ನೇರವಾಗಿ ದೆಹಲಿ ತಲುಪಿದ್ದಾನೆ. ಬಳಿಕ ಸಂಸತ್ ಮುಂಭಾಗದಲ್ಲಿ ತನ್ನತಿರಂಗ ಕಲರ್ ಕಾರಿನಲ್ಲಿ ತಿರುಗಾಡಿದ್ದಾನೆ.
ಅಜಾದಿ ಕಾ ಅಮೃತ ಮಹೋತ್ಸವ ಸಂಭ್ರಮದಲ್ಲಿ ಸಿದ್ದಾರ್ಥ್ ಗುಜರಾತ್ನ ಸೂರತ್ನಲ್ಲಿ ತಿರಂಗ ಪೈಂಟ್ಸ್ ಮಾಡಿಸಿಕೊಂಡಿದ್ದಾನೆ. ಬಳಿಕ ಸೂರತ್ನಿಂದ ದೆಹಲಿಗೆ ಅಂದರೆ 1157 ಕಿಲೋಮೀಟರ್ ತನ್ನ ಜಾಗ್ವಾರ್ ಕಾರಿನಲ್ಲಿ ಪ್ರಯಾಣ ಮಾಡಿದ್ದಾನೆ. ತನ್ನ ಸ್ನೇಹಿತನ ಜೊತೆ ಪ್ರಯಾಣ ಮಾಡಿದ ಸಿದ್ದಾರ್ಥ್ ದಾರಿಯುದ್ದಕ್ಕೂ ತಿರಂಗ ಹಾರಾಡಿಸುತ್ತಾ ಪ್ರಯಾಣ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದ ಮುಂದೆ ಜಾಗ್ವಾರ್ ಕಾರಿನಲ್ಲಿ ತಿರುಗಾಡಿ ತನ್ನ ಸಂತಸ ಹಂಚಿಕೊಂಡಿದ್ದಾನೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…