ದೆಹಲಿ : ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್ ಮಾಡಿಸಿಕೊಂಡಿದ್ದಾನೆ. ಸಿದ್ಧಾರ್ಥ್ ದೋಶಿ ತನ್ನ 71.60 ಲಕ್ಷ ರೂಪಾಯಿ ಜಾಗ್ವಾರ್ ಕಾರನ್ನು 2 ಲಕ್ಷ ರೂಪಾಯಿ ನೀಡಿ ಪೈಂಟ್ ಮಾಡಿಸಲಾಗಿದೆ. ಕೇಸರಿ, ಬಿಳಿ ಹಸಿರು ಬಣ್ಣ ಪೈಂಟ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಬಲ ನೀಡಲು ಈ ರೀತಿ ಮಾಡಿರುವುದಾಗಿ ಹೇಳಿದ್ದಾನೆ. ಸೂರತ್ ಮೂಲದ ಸಿದ್ದಾರ್ಥ್ ದೋಶಿ ತನ್ನ ಕಾರಿಗೆ ತಿರಂಗ ಪೈಂಟ್ಸ್ ಹಾಕಿಸಿಕೊಂಡು ಸೂರತ್ನಿಂದ ನೇರವಾಗಿ ದೆಹಲಿ ತಲುಪಿದ್ದಾನೆ. ಬಳಿಕ ಸಂಸತ್ ಮುಂಭಾಗದಲ್ಲಿ ತನ್ನತಿರಂಗ ಕಲರ್ ಕಾರಿನಲ್ಲಿ ತಿರುಗಾಡಿದ್ದಾನೆ.
ಅಜಾದಿ ಕಾ ಅಮೃತ ಮಹೋತ್ಸವ ಸಂಭ್ರಮದಲ್ಲಿ ಸಿದ್ದಾರ್ಥ್ ಗುಜರಾತ್ನ ಸೂರತ್ನಲ್ಲಿ ತಿರಂಗ ಪೈಂಟ್ಸ್ ಮಾಡಿಸಿಕೊಂಡಿದ್ದಾನೆ. ಬಳಿಕ ಸೂರತ್ನಿಂದ ದೆಹಲಿಗೆ ಅಂದರೆ 1157 ಕಿಲೋಮೀಟರ್ ತನ್ನ ಜಾಗ್ವಾರ್ ಕಾರಿನಲ್ಲಿ ಪ್ರಯಾಣ ಮಾಡಿದ್ದಾನೆ. ತನ್ನ ಸ್ನೇಹಿತನ ಜೊತೆ ಪ್ರಯಾಣ ಮಾಡಿದ ಸಿದ್ದಾರ್ಥ್ ದಾರಿಯುದ್ದಕ್ಕೂ ತಿರಂಗ ಹಾರಾಡಿಸುತ್ತಾ ಪ್ರಯಾಣ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದ ಮುಂದೆ ಜಾಗ್ವಾರ್ ಕಾರಿನಲ್ಲಿ ತಿರುಗಾಡಿ ತನ್ನ ಸಂತಸ ಹಂಚಿಕೊಂಡಿದ್ದಾನೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…