ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಸೇನಾ ಯೋಧ ಮೃತಪಟ್ಟಿದ್ದಾರೆ.

ಇದೇ ವೇಳೆ ಜೈಶ್‌ ಎ ಮೊಹಮ್ಮದ್‌ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರು ಭದ್ರತಾ ಪಡೆಯ ಬಲೆಗೆ ಬಿದ್ದಿದ್ದಾರೆ.

ಜಮ್ಮು ಪ್ರದೇಶದ ಉಧಂಪುರ, ದೋಡಾ ಮತ್ತು ಕಥುವಾ ಜಿಲ್ಲೆಗಳನ್ನು ಸಂಪರ್ಕಿಸುವ ಪರ್ವತ ಶ್ರೇಣಿಯ ತ್ರಿ-ಜಂಕ್ಷನ್‌ ಆಗಿರುವ ಉಧಂಪುರ ಬಸಂತಗಢ ಪ್ರದೇಶದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆಯು ತಿಳಿಸಿದ ನಂತರ ನಿನ್ನೆ ಸಂಜೆ ಈ ಎನ್‌ಕೌಂಟರ್‌ ಸಂಭವಿಸಿದೆ.

ಏತನ್ಮಧ್ಯೆ, ಭಯೋತ್ಪಾದಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರತಿ-ಗುಪ್ತಚರ ಘಟಕವು ಕಾಶ್ಮೀರ ಕಣಿವೆಯ ಏಳು ಜಿಲ್ಲೆಗಳಾದ ಶ್ರೀನಗರ, ಬಾರಾಮುಲ್ಲಾ, ಅನಂತನಾಗ್, ಕುಪ್ವಾರಾ, ಹಂದ್ವಾರ, ಪುಲ್ವಾಮಾ ಮತ್ತು ಶೋಪಿಯಾನ್‍ನಲ್ಲಿ ತೀವ್ರ ಶೋಧ ನಡೆಸಿತು. ದಾಳಿಯ ಸಮಯದಲ್ಲಿ,ಪೂಂಚ್ ವಲಯದಲ್ಲಿ ಭದ್ರತಾ ಪಡೆಗಳು 20 ಚೀನೀ ಹ್ಯಾಂಡ್ ಗ್ರೆನೇಡ್‍ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

41 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

51 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago