ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಸೇನಾ ಯೋಧ ಮೃತಪಟ್ಟಿದ್ದಾರೆ.
ಇದೇ ವೇಳೆ ಜೈಶ್ ಎ ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರು ಭದ್ರತಾ ಪಡೆಯ ಬಲೆಗೆ ಬಿದ್ದಿದ್ದಾರೆ.
ಜಮ್ಮು ಪ್ರದೇಶದ ಉಧಂಪುರ, ದೋಡಾ ಮತ್ತು ಕಥುವಾ ಜಿಲ್ಲೆಗಳನ್ನು ಸಂಪರ್ಕಿಸುವ ಪರ್ವತ ಶ್ರೇಣಿಯ ತ್ರಿ-ಜಂಕ್ಷನ್ ಆಗಿರುವ ಉಧಂಪುರ ಬಸಂತಗಢ ಪ್ರದೇಶದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆಯು ತಿಳಿಸಿದ ನಂತರ ನಿನ್ನೆ ಸಂಜೆ ಈ ಎನ್ಕೌಂಟರ್ ಸಂಭವಿಸಿದೆ.
ಏತನ್ಮಧ್ಯೆ, ಭಯೋತ್ಪಾದಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರತಿ-ಗುಪ್ತಚರ ಘಟಕವು ಕಾಶ್ಮೀರ ಕಣಿವೆಯ ಏಳು ಜಿಲ್ಲೆಗಳಾದ ಶ್ರೀನಗರ, ಬಾರಾಮುಲ್ಲಾ, ಅನಂತನಾಗ್, ಕುಪ್ವಾರಾ, ಹಂದ್ವಾರ, ಪುಲ್ವಾಮಾ ಮತ್ತು ಶೋಪಿಯಾನ್ನಲ್ಲಿ ತೀವ್ರ ಶೋಧ ನಡೆಸಿತು. ದಾಳಿಯ ಸಮಯದಲ್ಲಿ,ಪೂಂಚ್ ವಲಯದಲ್ಲಿ ಭದ್ರತಾ ಪಡೆಗಳು 20 ಚೀನೀ ಹ್ಯಾಂಡ್ ಗ್ರೆನೇಡ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…