ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರೂ ಹುತಾತ್ಮರಾಗಿದ್ದಾರೆ ಎಂದು ಶನಿವಾರ ಪೋಲಿಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿಯಿಂದ ಉತ್ತರ ಕಾಶ್ಮೀರ ಪಟ್ಟಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆ ನಡೆಸಿದೆ.
ಕಳದೆ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಉಗ್ರರೊಂದಿಗೆ ಭದ್ರತಾ ಸಿಬ್ಬಂದಿ ಎನ್ಕೌಂಟರ್ ನಡೆಸಿದರು. ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಇಬ್ಬರು ಯೋಧರು ಹುತಾತ್ಮರಾಗಿ ಮತ್ತಿಬ್ಬರು ಗಾಯಗೊಂಡಿದ್ದರು. ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಇಂದು ಮೂವರು ಉಗ್ರರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…