ದೇಶ- ವಿದೇಶ

ಖೋ-ಖೋ ವಿಶ್ವಕಪ್: ಎಂ.ಕೆ.ಗೌತಮ್, ಚೈತ್ರಾ ಅವರನ್ನು ಸನ್ಮಾನಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ನವದೆಹಲಿ: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಭಾರತದ ತಂಡ ವಿಜೇತರಾಗಿದೆ. ಈ ತಂಡಗಳು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡು ಸನ್ಮಾನಿಸುವ ಮೂಲಕ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗೌರವಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಜನವರಿ.21) ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡ ಸಚಿವರು ಖೋ-ಖೋ ಆಟಗಾರರಾದ ಎಂ.ಕೆ.ಗೌತಮ್, ಚೈತ್ರಾ, ಹಾಗೂ ಮತ್ತವರ ಕೋಚ್‌ಗಳಾದ ಸುಮಿತ್ ಭಾಟಿಯಾ ಮತ್ತು
ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಸನ್ಮಾಸಿದ್ದಾರೆ.

ಈ ವೇಳೆ ಶುಭ ಹಾರೈಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋ-ಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಅಲ್ಲದೇ ನೀವಿಬ್ಬರೂ ಕರ್ನಾಟಕದ ಗರಿಮೆಯನ್ನು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದರು.

ಕನ್ನಡ ನೆಲದ ಗ್ರಾಮೀಣ ಆಟಗಾರರಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಜೊತೆಗೆ ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಏರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಹೀಗಾಗಿ ನಿಮ್ಮಿಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಆಟಗಾರರಿಗೆ
ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಇನ್ನೂ ಗ್ರಾಮೀಣ ಆಟಗಾರರು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಖೋ-ಖೋ ಆಟಗಾರರಾದ ಗೌತಮ್‌ ಹಾಗೂ ಚೈತ್ರಾ ಅವರು ಮಾತನಾಡಿ, ನಮ್ಮ ಕರ್ನಾಟಕ ರಾಜ್ಯದವರೇ ಆಗಿರುವ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

14 mins ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

1 hour ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago