ನವದೆಹಲಿ: 2025ರ ಖೋ-ಖೋ ವಿಶ್ವಕಪ್ನಲ್ಲಿ ಪುರುಷರ ಮತ್ತು ಮಹಿಳೆಯರ ಭಾರತದ ತಂಡ ವಿಜೇತರಾಗಿದೆ. ಈ ತಂಡಗಳು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡು ಸನ್ಮಾನಿಸುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಜನವರಿ.21) ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡ ಸಚಿವರು ಖೋ-ಖೋ ಆಟಗಾರರಾದ ಎಂ.ಕೆ.ಗೌತಮ್, ಚೈತ್ರಾ, ಹಾಗೂ ಮತ್ತವರ ಕೋಚ್ಗಳಾದ ಸುಮಿತ್ ಭಾಟಿಯಾ ಮತ್ತು
ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಸನ್ಮಾಸಿದ್ದಾರೆ.
ಈ ವೇಳೆ ಶುಭ ಹಾರೈಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋ-ಖೋ ವಿಶ್ವಕಪ್ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಅಲ್ಲದೇ ನೀವಿಬ್ಬರೂ ಕರ್ನಾಟಕದ ಗರಿಮೆಯನ್ನು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದರು.
ಕನ್ನಡ ನೆಲದ ಗ್ರಾಮೀಣ ಆಟಗಾರರಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಜೊತೆಗೆ ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಏರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಹೀಗಾಗಿ ನಿಮ್ಮಿಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಆಟಗಾರರಿಗೆ
ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಇನ್ನೂ ಗ್ರಾಮೀಣ ಆಟಗಾರರು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖೋ-ಖೋ ಆಟಗಾರರಾದ ಗೌತಮ್ ಹಾಗೂ ಚೈತ್ರಾ ಅವರು ಮಾತನಾಡಿ, ನಮ್ಮ ಕರ್ನಾಟಕ ರಾಜ್ಯದವರೇ ಆಗಿರುವ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…