ಜೆರುಸಲೆಂ: ಮುಸ್ಲಿಂಮರ ಪವಿತ್ರ ಹಜ್ ಯಾತ್ರೆ ವೇಳೆ ಭಾರೀ ದುರಂತ ನಡೆದಿದ್ದು, ಅಧಿಕ ತಾಪಮಾನದಿಂದ 645 ಮಂದಿ ಸಾವನ್ನಪ್ಪಿದ್ದಾರೆ.
ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ 645 ಮಂದಿ ಮೃತಪಟ್ಟಿದ್ದು, ಈ ಪೈಕಿ 90 ಮಂದಿ ಭಾರತೀಯರಿದ್ದಾರೆ. ಇದರಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತರಿಬ್ಬರು ಬಕ್ರೀದ್ ಹಬ್ಬದ ಹಿನ್ನೆಲೆ ಹಜ್ ಯಾತ್ರೆಗೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೆಕ್ಕಾದ ಮೀನಾ ಎಂಬ ನಗರದಲ್ಲಿ ಇಬ್ಬರು ಬೆಂಗಳೂರಿನ ಯಾತ್ರಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ರುಕ್ಸಾನ ಹಾಗೂ ಮೊಹಮ್ಮದ್ ಇಲಿಯಾಸ್ ಎಂದು ಗುರುತಿಸಲಾಗಿದೆ. ಇನ್ನು ಈ ಬಾರಿ ಕರ್ನಾಟಕದಿಂದ 10,300 ಮಂದಿ ಹಜ್ ಯಾತ್ರೆಗೆ ತೆರಳಿದ್ದರು. ಇವರೊಂದಿಗೆ ರುಕ್ಸಾನ ಸಹ ತಮ್ಮ ಕುಟುಂಬದ ಜೊತೆಗೆ ಹಜ್ ಯಾತ್ರೆಗೆ ತೆರಳಿದ್ದರು.
ಈ ವೇಳೆ ಅಲ್ಲಿನ ತಾಪಮಾನ ಜಾಸ್ತಿಯಾಗಿರುವುದರಿಂದ ರುಕ್ಸಾನ ಸಾವನ್ನಪ್ಪಿದ್ದಾರೆ ಎಂದು ಹಜ್ ಕಮಿಟಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ಮಾಹಿತಿ ನೀಡಿದ್ದಾರೆ. ಮೆಕ್ಕಾದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಭಾರೀ ಏರಿಕೆಯಾಗುತ್ತಿದ್ದು, ಇದು ಹೀಗೆಯೇ ಮುಂದುವರಿದರೆ ಯಾತ್ರೆಗೆ ತೆರಳಿರುವ ಯಾತ್ರಿಗಳ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೂಲಂಕುಶವಾಗಿ ಮಾಹಿತಿ ಪಡೆಯುತ್ತಿರುವ ಕೇಂದ್ರ ಸರ್ಕಾರ ಭಾರತೀಯ ಯಾತ್ರಿಗಳನ್ನು ರಕ್ಷಣೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು, ಭಾರತೀಯ ಯಾತ್ರಿಗಳ ರಕ್ಷಣೆಗೆ ಸದಾ ಸಿದ್ಧ ಎಂದು ಮಾಹಿತಿ ನೀಡಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…