ದೇಶ- ವಿದೇಶ

ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಸಾವು; ರಾಜ್ಯದ 10 ಸಾವಿರಕ್ಕೂ ಹೆಚ್ಚು ಮಂದಿ ಸೇಫ್

ಜೆರುಸಲೆಂ: ಮುಸ್ಲಿಂಮರ ಪವಿತ್ರ ಹಜ್ ಯಾತ್ರೆ ವೇಳೆ ಭಾರೀ ದುರಂತ ನಡೆದಿದ್ದು, ಅಧಿಕ ತಾಪಮಾನದಿಂದ 645 ಮಂದಿ ಸಾವನ್ನಪ್ಪಿದ್ದಾರೆ.

ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ 645 ಮಂದಿ ಮೃತಪಟ್ಟಿದ್ದು, ಈ ಪೈಕಿ 90 ಮಂದಿ ಭಾರತೀಯರಿದ್ದಾರೆ. ಇದರಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತರಿಬ್ಬರು ಬಕ್ರೀದ್ ಹಬ್ಬದ ಹಿನ್ನೆಲೆ ಹಜ್ ಯಾತ್ರೆಗೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಮೆಕ್ಕಾದ ಮೀನಾ ಎಂಬ ನಗರದಲ್ಲಿ ಇಬ್ಬರು ಬೆಂಗಳೂರಿನ ಯಾತ್ರಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ರುಕ್ಸಾನ ಹಾಗೂ ಮೊಹಮ್ಮದ್ ಇಲಿಯಾಸ್ ಎಂದು ಗುರುತಿಸಲಾಗಿದೆ. ಇನ್ನು ಈ ಬಾರಿ ಕರ್ನಾಟಕದಿಂದ 10,300 ಮಂದಿ ಹಜ್ ಯಾತ್ರೆಗೆ ತೆರಳಿದ್ದರು. ಇವರೊಂದಿಗೆ ರುಕ್ಸಾನ ಸಹ ತಮ್ಮ ಕುಟುಂಬದ ಜೊತೆಗೆ ಹಜ್ ಯಾತ್ರೆಗೆ ತೆರಳಿದ್ದರು.

ಈ ವೇಳೆ ಅಲ್ಲಿನ ತಾಪಮಾನ ಜಾಸ್ತಿಯಾಗಿರುವುದರಿಂದ ರುಕ್ಸಾನ ಸಾವನ್ನಪ್ಪಿದ್ದಾರೆ ಎಂದು ಹಜ್ ಕಮಿಟಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ಮಾಹಿತಿ ನೀಡಿದ್ದಾರೆ. ಮೆಕ್ಕಾದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಭಾರೀ ಏರಿಕೆಯಾಗುತ್ತಿದ್ದು, ಇದು ಹೀಗೆಯೇ ಮುಂದುವರಿದರೆ ಯಾತ್ರೆಗೆ ತೆರಳಿರುವ ಯಾತ್ರಿಗಳ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೂಲಂಕುಶವಾಗಿ ಮಾಹಿತಿ ಪಡೆಯುತ್ತಿರುವ ಕೇಂದ್ರ ಸರ್ಕಾರ ಭಾರತೀಯ ಯಾತ್ರಿಗಳನ್ನು ರಕ್ಷಣೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು, ಭಾರತೀಯ ಯಾತ್ರಿಗಳ ರಕ್ಷಣೆಗೆ ಸದಾ ಸಿದ್ಧ ಎಂದು ಮಾಹಿತಿ ನೀಡಿದೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

1 hour ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

18 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

21 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

23 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

23 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

23 hours ago