ದೇಶ- ವಿದೇಶ

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪರ್ಭಾನಿ ಜಿಲ್ಲೆಯ ಮನವತ್ ತಾಲೂಕಿನ ಯಶ್ವಾಡಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದಲ್ಲಿ ಶನಿವಾರ (ಜೂ.20) ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಏಕಾಏಕಿ ದೇವಾಲಯದ ಮೇಲ್ಛಾವಣಿ ಕುಸಿದು ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇಲ್ಛಾವಣಿ ಕುಸಿದು ಬೀಳುವ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭೀಕರವಾಗಿದೆ. ಕಟ್ಟಡ ಕೆಲಸ ನಡೆಯುತ್ತಿದ್ದರೂ ಕೂಡ ಅಲ್ಲಿಯೇ ದೇವರನ್ನು ಪೂಜಿಸಲಾಗುತ್ತಿತ್ತು ಎಂದು ವಿಡಿಯೋ ಮೂಲಕ ತಿಳಿದುಬಂದಿದೆ. ಭಕ್ತಾಧಿಗಳು ಸಾಲಾಗಿ ಬಂದು ದೇವರಿಗೆ ನಮಸ್ಕರಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಮೇಲ್ಛಾವಣಿ ಕುಸಿಯುವಾಗ ಸುಮಾರು 30 ಭಕ್ತರು ಇರುವುದು ಕಂಡುಬಂದಿದ್ದು, ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಕೆಲ ಗಾಯಾಳುಗಳನ್ನು ಹೊರಕ್ಕೆ ತೆಗೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ.

ಈ ಬಗ್ಗೆ ಪರ್ಭಾನಿ ಜಿಲ್ಲಾ ಉಸ್ತುವಾರಿ ಸಚಿವೆ ಮೇಘನಾ ಬೋರ್ಡಿಕರ್‌ ಅವರು ಮಾತನಾಡಿ, ಗಾಯಾಳುಗಳು ಮತ್ತು ಮೃತರ ಕುಟುಂಬಸ್ಥರಿಗೆ ಅಗತ್ಯವಿರುವ ಎಲ್ಲಾ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago