ದೇಶ- ವಿದೇಶ

ಮಳೆ ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌: ಇಡೀ ಪೊಲೀಸ್‌ ಚೌಕಿಯೇ ಅಮಾನತುಗೊಳಿಸಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಜಲಾವೃತಗೊಂಡ ನಡುರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಪುರುಷ ಮತ್ತು ಯುವತಿಗೆ ಎರಡು ದಿನಗಳ ಹಿಂದೆಯಷ್ಟೇ ಯುಕವರ ಗುಂಪೊಂದು ಮಳೆ ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಘಟನಾ ಸ್ಥಳ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಿದ್ಧಾರೆ.

ಈ ಘಟನೆ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಬುಲೆಟ್‌ ರೈಲು ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದ, ಅವರನ್ನು ಪವನ್‌ ಯಾದವ್‌ ಮತ್ತು ಮೊಹಮ್ಮದ್‌ ಅರ್ಬಾಜ್‌ ಎಂದು ಗುರುತಿಸಲಾಗಿದೆ. ಇವರಾ ನಿಮ್ಮ ಸದ್ಭಾವನೆಯ ವ್ಯಕ್ತಿಗಳು? ಇವರಿಗೆ ಸದ್ಭಾವನೆ ರೈಲು ಓಡಿಸಬೇಕೆ? ಚಿಂತಿಸಬೇಡಿ ಇಂತವರಿಗೆ ಇನ್ನು ಮುಂದೆ ಬುಲೆಟ್‌ ರೈಲು ಓಡಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವವರನ್ನು ಬಿಡುವುದಿಲ್ಲ ಎಂದು ಹೇಳಿದ ಸಿಎಂ ಯೋಗಿ, ಮಹಿಳೆಯರ ರಕ್ಷಣೆಯಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಮಹಿಳೆಯರ ಸುರಕ್ಷತೆಯು ನಮಗೆ ಪ್ರಮುಖ ಆದ್ಯತೆಯಾಗಿದೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪ್ರತಿಯೊಬ್ಬ ಸಹೋದರಿ ಮತ್ತು ಮಗಳಿಗೆ ಭರವಸೆ ನೀಡಿದ್ದೇವೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪರಿಣಾಮ ಇಡೀ ಚೌಕಿಯನ್ನು ಅಮಾನತುಗೊಳಿಸಲಾಗಿದೆ, ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ, ಎಎಸ್ಪಿ, ಡಿಸಿಪಿ, ಎಲ್ಲರನ್ನೂ ತೆಗೆದುಹಾಕಲಾಗಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

 ಘಟನೆ ಹಿನ್ನೆಲೆ;

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಬಳಿ ಜಲಾವೃತಗೊಂಡ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಪುಂಡರ ಗುಂಪೊಂದು ಮಳೆ ನೀರನ್ನು ಎರಚಿ ಕಿರುಕುಳ ನೀಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಘಟನೆ ವಿರುದ್ದ ನೆಟ್ಟಿಗರು ಕಿಡಿಕಾರಿದ್ದರು.

ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಪುಂಡರು ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

1 hour ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

1 hour ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

2 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

3 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

3 hours ago