ದೇಶ- ವಿದೇಶ

ಮಳೆ ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌: ಇಡೀ ಪೊಲೀಸ್‌ ಚೌಕಿಯೇ ಅಮಾನತುಗೊಳಿಸಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಜಲಾವೃತಗೊಂಡ ನಡುರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಪುರುಷ ಮತ್ತು ಯುವತಿಗೆ ಎರಡು ದಿನಗಳ ಹಿಂದೆಯಷ್ಟೇ ಯುಕವರ ಗುಂಪೊಂದು ಮಳೆ ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಘಟನಾ ಸ್ಥಳ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಿದ್ಧಾರೆ.

ಈ ಘಟನೆ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಬುಲೆಟ್‌ ರೈಲು ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದ, ಅವರನ್ನು ಪವನ್‌ ಯಾದವ್‌ ಮತ್ತು ಮೊಹಮ್ಮದ್‌ ಅರ್ಬಾಜ್‌ ಎಂದು ಗುರುತಿಸಲಾಗಿದೆ. ಇವರಾ ನಿಮ್ಮ ಸದ್ಭಾವನೆಯ ವ್ಯಕ್ತಿಗಳು? ಇವರಿಗೆ ಸದ್ಭಾವನೆ ರೈಲು ಓಡಿಸಬೇಕೆ? ಚಿಂತಿಸಬೇಡಿ ಇಂತವರಿಗೆ ಇನ್ನು ಮುಂದೆ ಬುಲೆಟ್‌ ರೈಲು ಓಡಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವವರನ್ನು ಬಿಡುವುದಿಲ್ಲ ಎಂದು ಹೇಳಿದ ಸಿಎಂ ಯೋಗಿ, ಮಹಿಳೆಯರ ರಕ್ಷಣೆಯಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಮಹಿಳೆಯರ ಸುರಕ್ಷತೆಯು ನಮಗೆ ಪ್ರಮುಖ ಆದ್ಯತೆಯಾಗಿದೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪ್ರತಿಯೊಬ್ಬ ಸಹೋದರಿ ಮತ್ತು ಮಗಳಿಗೆ ಭರವಸೆ ನೀಡಿದ್ದೇವೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪರಿಣಾಮ ಇಡೀ ಚೌಕಿಯನ್ನು ಅಮಾನತುಗೊಳಿಸಲಾಗಿದೆ, ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ, ಎಎಸ್ಪಿ, ಡಿಸಿಪಿ, ಎಲ್ಲರನ್ನೂ ತೆಗೆದುಹಾಕಲಾಗಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

 ಘಟನೆ ಹಿನ್ನೆಲೆ;

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಬಳಿ ಜಲಾವೃತಗೊಂಡ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಪುಂಡರ ಗುಂಪೊಂದು ಮಳೆ ನೀರನ್ನು ಎರಚಿ ಕಿರುಕುಳ ನೀಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಘಟನೆ ವಿರುದ್ದ ನೆಟ್ಟಿಗರು ಕಿಡಿಕಾರಿದ್ದರು.

ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಪುಂಡರು ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago