ನವದೆಹಲಿ: ಅಸೋಜ್ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ.
ಮುಂದಿನ ಅಕ್ಟೋಬರ್.1ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಕ್ಟೋಬರ್.5ಕ್ಕೆ ನಿಗದಿಪಡಿಸಿದೆ. ಇನ್ನು ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಅಕ್ಟೋಬರ್ 4ರ ಬದಲಿಗೆ ಅಕ್ಟೋಬರ್ 8ಕ್ಕೆ ಪರಿಷ್ಕರಿಸಿದೆ.
ಈ ಮೂಲಕ ಚುನಾವಣಾ ಆಯೋಗವು ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಎತ್ತಿ ಹಿಡಿದಿದೆ.
ಇದು ಶತಮಾನಗಳ ಸಂಪ್ರದಾಯ ಹಬ್ಬವಾಗಿರುವುದರಿಂದ ಜನತೆ ಮತದಾನವನ್ನು ಕೂಡ ನಿರಾಕರಿಸಲು ಮುಂದಾಗಿದ್ದಾರೆ. ಇದರಿಂದ ಮತದಾರರ ಭಾಗವಹಿಸುವಿಕೆಯನ್ನು ಕಡಿಮೆ ಮಾಡಬಹುದು. ಹಾಗಾಗಿ ಸಮುದಾಯಗಳ ಭಾವನೆ ಗೌರವಿಸುವ ಉದ್ದೇಶದಿಂದ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡಿದೆ.
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…