ನವದೆಹಲಿ: ಅಸೋಜ್ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ.
ಮುಂದಿನ ಅಕ್ಟೋಬರ್.1ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಕ್ಟೋಬರ್.5ಕ್ಕೆ ನಿಗದಿಪಡಿಸಿದೆ. ಇನ್ನು ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಅಕ್ಟೋಬರ್ 4ರ ಬದಲಿಗೆ ಅಕ್ಟೋಬರ್ 8ಕ್ಕೆ ಪರಿಷ್ಕರಿಸಿದೆ.
ಈ ಮೂಲಕ ಚುನಾವಣಾ ಆಯೋಗವು ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಎತ್ತಿ ಹಿಡಿದಿದೆ.
ಇದು ಶತಮಾನಗಳ ಸಂಪ್ರದಾಯ ಹಬ್ಬವಾಗಿರುವುದರಿಂದ ಜನತೆ ಮತದಾನವನ್ನು ಕೂಡ ನಿರಾಕರಿಸಲು ಮುಂದಾಗಿದ್ದಾರೆ. ಇದರಿಂದ ಮತದಾರರ ಭಾಗವಹಿಸುವಿಕೆಯನ್ನು ಕಡಿಮೆ ಮಾಡಬಹುದು. ಹಾಗಾಗಿ ಸಮುದಾಯಗಳ ಭಾವನೆ ಗೌರವಿಸುವ ಉದ್ದೇಶದಿಂದ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…