ದೇಶ- ವಿದೇಶ

ಹತ್ರಾಸ್ ಅತ್ಯಾಚಾರ | ಸಂತ್ರೆಸ್ತೆಯ ಕುಟುಂಬ ಭೇಟಿ ಮಾಡಿದ ರಾಹುಲ್‌

ಉತ್ತರ ಪ್ರದೇಶ: 2020ರ ಸೆಪ್ಟೆಂಬರ್‌ನಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಗುರುವಾರ ಭೇಟಿ ಮಾಡಿದ್ದಾರೆ.

ಈ ಹಿನ್ನೆಲೆ ಹಾಥರಸ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಲಾಗಿತ್ತು.

ದೇಶದಲ್ಲಿ ನೊಂದ ಜನರೊಂದಿಗೆ ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ಯಾವಾಗಲೂ ಜೊತೆಯಾಗಿದ್ದು ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ನೊಂದವರ ಪರವಾಗಿರುತ್ತಾರೆ. ಹತ್ರಾಸ್‌ ಸಂತ್ರಸ್ತೆಯ ಕುಟುಂಬದೊಂದಿಗೆ ಈಗಲೂ ಸಂಪರ್ಕದಲ್ಲಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್‌ ನಾಯಕ ಚಂದ್ರಗುಪ್ತ ವಿಕ್ರಮಾದಿತ್ಯಾ ಹೇಳಿದರು.

2020 ಆಕೋಬರ್‌ 3ರಂದು ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಭೇಟಿ ಮಾಡಿದ್ದ ರಾಹುಲ್‌ ಹಾಗೂ ಪ್ರಿಯಾಂಕಾ, ಯುವತಿ ಸಾವಿಗೆ ನ್ಯಾಯ ಕೊಡಿಸಲು ಹೋರಾಡುವುದಾಗಿ ಭರವಸೆ ನೀಡಿದ್ದರು.

ಏನಿದು ಹತ್ರಾಸ್‌ ಘಟನೆ?
2020 ಸೆಪ್ಟೆಂಬರ್‌ 14 ರಂದು, ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ 19 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಳು. ನಂತರ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಕಾರಿಯಾಗದೇ ಸೆಪ್ಟೆಂಬರ್‌ 29ರಂದು ಆಕೆ ಮೃತಪಟ್ಟಿದ್ದಳು. ಆಕೋಬರ್‌ 30ರಂದು ಬೆಳಿಗ್ಗೆ ಅಂತ್ಯಕ್ರಿಯೆ ನಡೆದತ್ತು.

ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಬೇಗನೆ ಅಂತ್ಯಕ್ರಿಯೆ ನಡೆಸಿ ಎಂದು ಒತ್ತಾಯಿಸಿದ್ದರು ಎಂದು ಸಂತ್ರಸ್ತೆ ಕುಂಟುಂಬ ಆರೋಪಿಸಿದ್ದರು. ಆದರೆ ಈ ಆರೋಪ ಅಲ್ಲಗೆಳೆದಿದ್ದ ಪೊಲೀಸರು, ಕುಟುಂಬ ಹೇಳಿಕೆಯ ಪ್ರಕಾರವೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಹೇಳಿದ್ದರು.

ಈ ಘಟನೆ ಬಗ್ಗೆ ದೇಶದಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago