ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನ ಸತ್ತು ಬದುಕುತ್ತಿದ್ದರೆ. ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು ಎಂದು ಪ್ರಶ್ನಿಸಿದ ಅವರು, ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಯಾವ ಪುರುಷಾರ್ಥಕ್ಕೆ ಗ್ರೇಟರ್ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್.. ಬ್ರ್ಯಾಂಡ್.. ಎಂದು ಭಜನೆ ಮಾಡುತ್ತಿದ್ದೀರಲ್ಲ.. ಬ್ರ್ಯಾಂಡ್ ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಪ್ರಶ್ನಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…