ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ಅತಿವೇಗದ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.
ಇದನ್ನು ಓದಿ: 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು: ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು
ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.
ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲ ಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…