ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ.
ನವದೆಹಲಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವರ ಜತೆ ಮುಖ್ಯವಾಗಿ ಮಾತುಕತೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಕ್ಕೆ ಸಂಬಂಧಪಟ್ಟ ಅಂತರ ರಾಜ್ಯ ನೀರಾವರಿ ವಿವಾದಗಳು, ರಾಜ್ಯ ಎದುರಿಸುತ್ತಿರುವ ಜಲ ಸಂಕಷ್ಟ, ರಾಜ್ಯದ ನೀರಾವರಿ ಯೋಜನೆಗಳಿಗೆ ತ್ವರಿತ ಅನುಮೋದನೆ ಮತ್ತು ಅಗತ್ಯ ಅನುದಾನ ನೀಡುವ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಮಾಜಿ ಪ್ರಧಾನಿಗಳ ಬೇಡಿಕೆಗಳ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಶಕ್ತಿ ಸಚಿವರು, ಈ ಬಗ್ಗೆ ತಾವೇ ಖುದ್ದು ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ಅಲ್ಲದೆ, ರಾಜ್ಯದ ಜಲ ವಿವಾದಗಳ ಬಗ್ಗೆ ಸಚಿವರು ಮಾಜಿ ಪ್ರಧಾನಿಗಳಿಂದ ಸಾಕಷ್ಟು ಮಾಹಿತಿ ಪಡೆದುಕೊಂಡರು. ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆಯ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಬೇಕು ಎಂದು ದೇವೇಗೌಡರ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…