ದೇಶ- ವಿದೇಶ

ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಕೃಷಿ ಸಚಿವರಿಗೆ ಎಚ್‌ಡಿಕೆ ಪತ್ರ

ಹೊಸದಿಲ್ಲಿ : ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.

ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೊಷಣೆ (MSP) ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೃಷಿ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದಾರೆ.

ಸದ್ಯಕ್ಕೆ ಕೇಂದ್ರ ಸರಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ಕೂಡಲೇ ಮಾವು ಖರೀದಿ ಆರಂಭಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ವಿನಂತಿ ಮಾಡಿದ್ದಾರೆ.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

6 mins ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

59 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago