HDK writes to the Union Agriculture Minister to Minimum Support Price for mango crop
ಹೊಸದಿಲ್ಲಿ : ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೊಷಣೆ (MSP) ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೃಷಿ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದಾರೆ.
ಸದ್ಯಕ್ಕೆ ಕೇಂದ್ರ ಸರಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ಕೂಡಲೇ ಮಾವು ಖರೀದಿ ಆರಂಭಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ವಿನಂತಿ ಮಾಡಿದ್ದಾರೆ.
ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…