accident (1)
ಚೆನ್ನೈ : ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ.
ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಒಂದು ಬಸ್ ತಿರುಪ್ಪೂರಿನಿಂದ ಕಾರೈಕುಡಿಗೆ ಪ್ರಯಾಣಿಸುತ್ತಿತ್ತು. ಇನ್ನೊಂದು ಬಸ್ ಕಾರೈಕುಡಿಯಿಂದ ದಿಂಡಿಗಲ್ ಜಿಲ್ಲೆಯ ಕಡೆಗೆ ಪ್ರಯಾಣಿಸುತ್ತಿತ್ತು.
ರಕ್ಷಣಾ ತಂಡಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಿದ್ದು, ಅಪಘಾತದ ಕಾರಣ ಮತ್ತು ಆಸ್ಪತ್ರೆಗೆ ದಾಖಲಾದವರ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ ; ಮನನೊಂದ 22 ವರ್ಷದ ಯವತಿ ಆತ್ಮಹತ್ಯೆ
ದಕ್ಷಿಣ ತಮಿಳುನಾಡಿನಲ್ಲಿ ಕೆಲ ದಿನಗಳ ಹಿಂದಷ್ಟೇ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ಒಂದೇ ವಾರದಲ್ಲಿ 2ನೇ ಬಸ್ ಅಪಘಾತ ಪ್ರಕರಣ ವರದಿಯಾಗಿದೆ.
ತೆಂಕಾಸಿ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದರು. ನಂತರ ತನಿಖಾಧಿಕಾರಿಗಳು ಒಂದು ಬಸ್ನ ಅಜಾಗರೂಕ ಚಾಲನೆಯೇ ಇದಕ್ಕೆ ಕಾರಣವೆಂದು ಗುರುತಿಸಿದ್ದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…