ದೇಶ- ವಿದೇಶ

ಅಮೇರಿಕಾದಲ್ಲಿ ದಿಢೀರ್‌ ಪ್ರವಾಹ: 10 ಮಂದಿ ಸಾವು

ವಾಷಿಂಗ್ಟನ್:‌ ಭಾರೀ ಹವಾಮಾನ ವೈಪರೀತ್ಯದಿಂದಾಗಿ ವಿಶ್ವದ ದೊಡ್ಡಣ್ಣ ಅಮೇರಿಕಾ ತತ್ತರಿಸಿ ಹೋಗಿದ್ದು, ಇಲ್ಲಿನ ಆಗ್ನೇಯ ಭಾಗದ ಕೆಂಟಕಿಯಲ್ಲಿ ಮಳೆಯಿಂದ ಹಠಾತ್‌ ಪ್ರವಾಹ ಉಂಟಾಗಿದೆ.

15 ಸೆಂಟಿ ಮೀಟರ್‌ ಮಳೆಯಿಂದ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ಪ್ರವಾಹದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರವಾಹದಿಂದ ಹಲವು ಮಂದಿ ನಾಪತ್ತೆಯಾಗಿದ್ದು, ಇಲ್ಲಿಯವರೆಗೆ ಒಂದು ಸಾವಿರ ಮಂದಿಯನ್ನು ರಕ್ಷಿಸಲಾಗಿದೆ. ಬಲವಾದ ಗಾಳಿ ಬೀಸುತ್ತಿರುವ ಪರಿಣಾಮ 40 ಸಾವಿರಕ್ಕೂ ಹೆಚ್ಚಿನ ಮನೆಗಳು ಕತ್ತಲಲ್ಲಿ ಮುಳುಗಿ ಹೋಗಿವೆ.

ಇನ್ನು ಅಮೇರಿಕಾದ ಉತ್ತರ ಪ್ರಾಂತ್ಯದಲ್ಲಿ ಕೊರೆವ ಚಳಿಗೆ ಜನ ತತ್ತರಿಸಿ ಹೋಗಿದ್ದಾರೆ. ನಾರ್ತ್ ಡಕೋಟಾ, ಸೌತ್‌ ಡಕೋಟಾದ ಕೆಲವೆಡೆ ಉಷ್ಣಾಂಶ -‌45 ಡಿಗ್ರಿಗೆ ಕುಸಿದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

1 hour ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

1 hour ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

1 hour ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago