Kodagu rain
ಡೆಹ್ರಾಡೂನ್ : ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್ನಲ್ಲಿ ಮಳೆಯ ಪ್ರವಾಹದಿಂದ ವಿನಾಶವುಂಟಾಗಿದೆ. ಉಕ್ಕಿ ಹರಿಯುವ ನದಿತೊರೆಗಳು, ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿರಂತರ ಮಳೆಗೆ ಇದುವರೆಗೆ ೧೮ ಮಂದಿ ಮೃತಪಟ್ಟು, ೨೦ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸುಮಾರು ೯೦೦ ಜನರನ್ನು ರಕ್ಷಿಸಿದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಯುಎಸ್ಡಿಎಂಎ) ವರದಿಯ ಪ್ರಕಾರ, ಡೆಹ್ರಾಡೂನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ೧೮ ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೈನಿತಾಲ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ತಲಾ ಒಂದು ಸಾವು ದಾಖಲಾಗಿದೆ.
ಡೆಹ್ರಾಡೂನ್ನ ವಿಕಾಸನಗರದಲ್ಲಿ ಟನ್ಸ್ ನದಿಯ ಉಕ್ಕಿ ಹರಿಯುತ್ತಿದ್ದು, ನದಿ ದಾಟುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯೊಂದು ಪ್ರವಾಹದ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ದುರಂತದಲ್ಲಿ ಮೊರಾದಾಬಾದ್ ಜಿಲ್ಲೆಯ ಮುಧಿಯಾ ಜೈನ್ ಗ್ರಾಮದ ಆರು ಜನರು ಸಾವನ್ನಪ್ಪಿದ್ದಾರೆ.
ಸಹಸ್ರಧಾರ ಮತ್ತು ಮಾಲ್ದೇವ್ತಾ ಪ್ರದೇಶಗಳು ಹೆಚ್ಚು ಹಾನಿಗೀಡಾಗಿವೆ. ರಿಸ್ಪಾನಾ ಮತ್ತು ಬಿಂದಾಲ್ ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವಾರು ಪ್ರದೇಶಗಳು ಪ್ರವಾಹಕ್ಕೆ ಮುಳುಗಿವೆ. ಮನೆಗಳು, ಅಂಗಡಿ ಮತ್ತು ಹೊಟೇಲ್ಗಳು ಸಹ ಉಕ್ಕಿ ಹರಿಯುತ್ತಿರುವ ನೀರಿನಿಂದ ಕೊಚ್ಚಿ ಹೋಗಿವೆ.
ಸಹಸ್ರಧಾರಾದ ಕಾರ್ಲಿಗಾಡ್ ಪ್ರದೇಶದಲ್ಲಿ, ನೀರಿನಲ್ಲಿ ಮಣ್ಣು ಕೊಚ್ಚಿ ಹೋಗಿ ೮ ಅಂಗಡಿಗಳು ಮತ್ತು ಹೋಟೆಲ್ ಕೊಚ್ಚಿಹಾಕಿ, ಇಬ್ಬರು ಕಾಣೆಯಾಗಿದ್ದಾರೆ. ಡಿಐಟಿ ಕಾಲೇಜು ಬಳಿಯ ಗ್ರೀನ್ ವ್ಯಾಲಿ ಪಿಜಿಯಲ್ಲಿ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಅವರ ಶವವನ್ನು ಎಸ್ಡಿಆರ್ಎಫ್ ಹೊರತೆಗೆದಿದೆ.
ಮಸ್ಸೂರಿಯ ಝರಿಪಾನಿ ಟೋಲ್ ಪ್ಲಾಜಾದಲ್ಲಿ ಭೂಕುಸಿತದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಕಲ್ಸಿ-ಚಕ್ರತ ಮೋಟಾರ್ ರಸ್ತೆಯಲ್ಲಿ ಕಲ್ಲು ಬಿದ್ದು ಮತ್ತೊಬ್ಬ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…