ದೇಶ- ವಿದೇಶ

ಡೆಹ್ರಾಡೂನ್‌ನಲ್ಲಿ ಭಾರಿ ಮಳೆ : 17 ಸಾವು, ಹಲವರು ನಾಪತ್ತೆ

ಡೆಹ್ರಾಡೂನ್ : ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆಯ ಪ್ರವಾಹದಿಂದ ವಿನಾಶವುಂಟಾಗಿದೆ. ಉಕ್ಕಿ ಹರಿಯುವ ನದಿತೊರೆಗಳು, ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿರಂತರ ಮಳೆಗೆ ಇದುವರೆಗೆ ೧೮ ಮಂದಿ ಮೃತಪಟ್ಟು, ೨೦ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸುಮಾರು ೯೦೦ ಜನರನ್ನು ರಕ್ಷಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಯುಎಸ್‌ಡಿಎಂಎ) ವರದಿಯ ಪ್ರಕಾರ, ಡೆಹ್ರಾಡೂನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ೧೮ ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೈನಿತಾಲ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ತಲಾ ಒಂದು ಸಾವು ದಾಖಲಾಗಿದೆ.

ಡೆಹ್ರಾಡೂನ್‌ನ ವಿಕಾಸನಗರದಲ್ಲಿ ಟನ್ಸ್ ನದಿಯ ಉಕ್ಕಿ ಹರಿಯುತ್ತಿದ್ದು, ನದಿ ದಾಟುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯೊಂದು ಪ್ರವಾಹದ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ದುರಂತದಲ್ಲಿ ಮೊರಾದಾಬಾದ್ ಜಿಲ್ಲೆಯ ಮುಧಿಯಾ ಜೈನ್ ಗ್ರಾಮದ ಆರು ಜನರು ಸಾವನ್ನಪ್ಪಿದ್ದಾರೆ.

ಸಹಸ್ರಧಾರ ಮತ್ತು ಮಾಲ್ದೇವ್ತಾ ಪ್ರದೇಶಗಳು ಹೆಚ್ಚು ಹಾನಿಗೀಡಾಗಿವೆ. ರಿಸ್ಪಾನಾ ಮತ್ತು ಬಿಂದಾಲ್ ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವಾರು ಪ್ರದೇಶಗಳು ಪ್ರವಾಹಕ್ಕೆ ಮುಳುಗಿವೆ. ಮನೆಗಳು, ಅಂಗಡಿ ಮತ್ತು ಹೊಟೇಲ್‌ಗಳು ಸಹ ಉಕ್ಕಿ ಹರಿಯುತ್ತಿರುವ ನೀರಿನಿಂದ ಕೊಚ್ಚಿ ಹೋಗಿವೆ.

ಸಹಸ್ರಧಾರಾದ ಕಾರ್ಲಿಗಾಡ್ ಪ್ರದೇಶದಲ್ಲಿ, ನೀರಿನಲ್ಲಿ ಮಣ್ಣು ಕೊಚ್ಚಿ ಹೋಗಿ ೮ ಅಂಗಡಿಗಳು ಮತ್ತು ಹೋಟೆಲ್ ಕೊಚ್ಚಿಹಾಕಿ, ಇಬ್ಬರು ಕಾಣೆಯಾಗಿದ್ದಾರೆ. ಡಿಐಟಿ ಕಾಲೇಜು ಬಳಿಯ ಗ್ರೀನ್ ವ್ಯಾಲಿ ಪಿಜಿಯಲ್ಲಿ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಅವರ ಶವವನ್ನು ಎಸ್‌ಡಿಆರ್‌ಎಫ್ ಹೊರತೆಗೆದಿದೆ.

ಮಸ್ಸೂರಿಯ ಝರಿಪಾನಿ ಟೋಲ್ ಪ್ಲಾಜಾದಲ್ಲಿ ಭೂಕುಸಿತದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಕಲ್ಸಿ-ಚಕ್ರತ ಮೋಟಾರ್ ರಸ್ತೆಯಲ್ಲಿ ಕಲ್ಲು ಬಿದ್ದು ಮತ್ತೊಬ್ಬ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

5 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

7 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

9 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

9 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

10 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

10 hours ago