ದೇಶ- ವಿದೇಶ

ಡೆಹ್ರಾಡೂನ್‌ನಲ್ಲಿ ಭಾರಿ ಮಳೆ : 17 ಸಾವು, ಹಲವರು ನಾಪತ್ತೆ

ಡೆಹ್ರಾಡೂನ್ : ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆಯ ಪ್ರವಾಹದಿಂದ ವಿನಾಶವುಂಟಾಗಿದೆ. ಉಕ್ಕಿ ಹರಿಯುವ ನದಿತೊರೆಗಳು, ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿರಂತರ ಮಳೆಗೆ ಇದುವರೆಗೆ ೧೮ ಮಂದಿ ಮೃತಪಟ್ಟು, ೨೦ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸುಮಾರು ೯೦೦ ಜನರನ್ನು ರಕ್ಷಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಯುಎಸ್‌ಡಿಎಂಎ) ವರದಿಯ ಪ್ರಕಾರ, ಡೆಹ್ರಾಡೂನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ೧೮ ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೈನಿತಾಲ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ತಲಾ ಒಂದು ಸಾವು ದಾಖಲಾಗಿದೆ.

ಡೆಹ್ರಾಡೂನ್‌ನ ವಿಕಾಸನಗರದಲ್ಲಿ ಟನ್ಸ್ ನದಿಯ ಉಕ್ಕಿ ಹರಿಯುತ್ತಿದ್ದು, ನದಿ ದಾಟುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯೊಂದು ಪ್ರವಾಹದ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ದುರಂತದಲ್ಲಿ ಮೊರಾದಾಬಾದ್ ಜಿಲ್ಲೆಯ ಮುಧಿಯಾ ಜೈನ್ ಗ್ರಾಮದ ಆರು ಜನರು ಸಾವನ್ನಪ್ಪಿದ್ದಾರೆ.

ಸಹಸ್ರಧಾರ ಮತ್ತು ಮಾಲ್ದೇವ್ತಾ ಪ್ರದೇಶಗಳು ಹೆಚ್ಚು ಹಾನಿಗೀಡಾಗಿವೆ. ರಿಸ್ಪಾನಾ ಮತ್ತು ಬಿಂದಾಲ್ ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವಾರು ಪ್ರದೇಶಗಳು ಪ್ರವಾಹಕ್ಕೆ ಮುಳುಗಿವೆ. ಮನೆಗಳು, ಅಂಗಡಿ ಮತ್ತು ಹೊಟೇಲ್‌ಗಳು ಸಹ ಉಕ್ಕಿ ಹರಿಯುತ್ತಿರುವ ನೀರಿನಿಂದ ಕೊಚ್ಚಿ ಹೋಗಿವೆ.

ಸಹಸ್ರಧಾರಾದ ಕಾರ್ಲಿಗಾಡ್ ಪ್ರದೇಶದಲ್ಲಿ, ನೀರಿನಲ್ಲಿ ಮಣ್ಣು ಕೊಚ್ಚಿ ಹೋಗಿ ೮ ಅಂಗಡಿಗಳು ಮತ್ತು ಹೋಟೆಲ್ ಕೊಚ್ಚಿಹಾಕಿ, ಇಬ್ಬರು ಕಾಣೆಯಾಗಿದ್ದಾರೆ. ಡಿಐಟಿ ಕಾಲೇಜು ಬಳಿಯ ಗ್ರೀನ್ ವ್ಯಾಲಿ ಪಿಜಿಯಲ್ಲಿ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಅವರ ಶವವನ್ನು ಎಸ್‌ಡಿಆರ್‌ಎಫ್ ಹೊರತೆಗೆದಿದೆ.

ಮಸ್ಸೂರಿಯ ಝರಿಪಾನಿ ಟೋಲ್ ಪ್ಲಾಜಾದಲ್ಲಿ ಭೂಕುಸಿತದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಕಲ್ಸಿ-ಚಕ್ರತ ಮೋಟಾರ್ ರಸ್ತೆಯಲ್ಲಿ ಕಲ್ಲು ಬಿದ್ದು ಮತ್ತೊಬ್ಬ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

15 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

15 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

15 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

16 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

16 hours ago